newsics.com
ಮಂಗಳೂರು: ಮಂಗಳೂರಿನಿಂದ ಬೆಂಗಳೂರಿಗೆ ಮಧ್ಯಾಹ್ನದ ರೈಲಿನಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ ರೈಲ್ವೇ ಇಲಾಖೆ ಸಂತಸದ ಸುದ್ದಿ ನೀಡಿದೆ.
ಬೆಳಗ್ಗೆ 11.30ಕ್ಕೆ ಹೊರಟು, ರಾತ್ರಿ 8.45ಕ್ಕೆ ತಲುಪುತ್ತಿದ್ದ ಮಂಗಳೂರು-ಯಶವಂತಪುರ (ಬೆಂಗಳೂರು) ರೈಲಿನ ಸಮಯ ಬದಲಾಯಿಸಿದೆ. 2024ರ ನವೆಂಬರ್ 1ರಿಂದ ಹೊಸ ವೇಳಾಪಟ್ಟಿ ಜಾರಿಗೆ ಬರಲಿದೆ.
ಬೆಳಗ್ಗೆ 11.30ಕ್ಕೆ ಹೊರಡುತ್ತಿದ್ದ ರೈಲಿನ ಸಮಯವನ್ನು ಬೆಳಗ್ಗೆ 7 ಗಂಟೆಗೆ ಬದಲಾಯಿಸಲಾಗಿದೆ. ವಾರದಲ್ಲಿ ಮೂರು ದಿನ ಸಂಚರಿಸುವ ಮಂಗಳೂರು ಜಂಕ್ಷನ್-ಯಶವಂತಪುರ (ರೈಲು ಸಂಖ್ಯೆ 16576) ವೇಳಾಪಟ್ಟಿ ಬದಲಾವಣೆಯಾಗಿದೆ.
ಪರಿಷ್ಕೃತ ವೇಳಾಪಟ್ಟಿ ಪ್ರಕಾರ, ಈ ರೈಲು ಬೆಳಗ್ಗೆ 7 ಗಂಟೆಗೆ ಮಂಗಳೂರು ಜಂಕ್ಷನ್ನಿಂದ ಹೊರಟರೆ ಸಂಜೆ 4.30ಕ್ಕೆ ಬೆಂಗಳೂರಿನ ಯಶವಂತಪುರ ನಿಲ್ದಾಣ ತಲುಪಲಿದೆ.
ಮಂಗಳೂರು ಜಂಕ್ಷನ್ನಿಂದ 7 ಗಂಟೆಗೆ ರೈಲು ಹೊರಡುತ್ತದೆ. ಬಂಟ್ವಾಳದಿಂದ 7.35, ಕಬಕ ಪುತ್ತೂರಿನಿಂದ 8.22, ಸುಬ್ರಹ್ಮಣ್ಯ ರಸ್ತೆ ನಿಲ್ದಾಣದಿಂದ 9.10, ಸಕಲೇಶಪುರದಿಂದ 11.40ಕ್ಕೆ, ಆಲೂರಿನಿಂದ ಮಧ್ಯಾಹ್ನ 12.15ಕ್ಕೆ, ಹಾಸನದಿಂದ 1.10ಕ್ಕೆ ಚನ್ನರಾಯಪಟ್ಟಣದಿಂದ 1.22ಕ್ಕೆ, ಶ್ರವಣಬೆಳಗೊಳದಿಂದ 1.32ಕ್ಕೆ, ಬಾಲಗಂಗಾಧರನಾಥ ನಗರ ನಿಲ್ದಾಣದಿಂದ 1.59ಕ್ಕೆ, ಯಡಿಯೂರಿನಿಂದ 2.12ಕ್ಕೆ, ಕುಣಿಗಲ್ನಿಂದ 2.25ಕ್ಕೆ, ನೆಲಮಂಗಲದಿಂದ 3ಕ್ಕೆ, ಚಿಕ್ಕಬಾಣಾವರದಿಂದ 3.45ಕ್ಕೆ ಹೊರಡಲಿದೆ. ಸೋಮವಾರ, ಬುಧವಾರ ಹಾಗೂ ಶುಕ್ರವಾರ ರೈಲು ಮಂಗಳೂರು ಜಂಕ್ಷನ್ನಿಂದ ಹೊರಡಲಿದೆ.
ಕತ್ತಿಯಿಂದ ಪತ್ನಿಯ ಕುತ್ತಿಗೆ ಕಡಿದು ಡ್ಯಾನ್ಸ್ ಮಾಡಿದ ಪಾನಮತ್ತ ಪತಿ! ಚಿಂತಾಜನಕ ಸ್ಥಿತಿಯಲ್ಲಿ ಅನಿತಾ
ವಿಭಿನ್ನ ಬಣ್ಣದ ಕಣ್ಣಿನ ಅಪರೂಪದ ಚಿರತೆ ಪತ್ತೆ: ದೇಶದಲ್ಲಿ ಇದೇ ಮೊದಲು!
ವಾರ ಭವಿಷ್ಯ 04-08-2024 ರಿಂದ 10-08-2024 … ಸಂಪತ್ತಿನ ಬಗ್ಗೆ ಎಲ್ಲರಿಗೂ ಜಾಗರೂಕತೆ ಅವಶ್ಯ, ಈ ವಾರ ಯಾರಿಗೇನು ಫಲ?