newsics.com
ಬಾಂಗ್ಲಾದೇಶದಲ್ಲಿ ಹೆಚ್ಚುತ್ತಿರುವ ಉದ್ನಿಗ್ನತೆ ನಡುವೆ ಪ್ರಧಾನಿ ಶೇಖ್ ಹಸೀನಾ ಅವರು ‘ಸುರಕ್ಷಿತ ಸ್ಥಳ’ಕ್ಕಾಗಿ ಢಾಕಾ ಅರಮನೆ ತೊರೆದಿದ್ದಾರೆ. ಹಸೀನಾ ಆಡಳಿತದ ಮೇಲೆ ಹೆಚ್ಚುತ್ತಿರುವ ಅಶಾಂತಿ ಮತ್ತು ಒತ್ತಡದ ಮಧ್ಯೆ ಈ ನಿರ್ಧಾರ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಶೇಕ್ ಹಸೀನಾ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಢಾಕಾ ಅರಮನೆಯನ್ನು ತೊರೆದು ಸುರಕ್ಷತೆಗಾಗಿ ಭಾರತದಲ್ಲಿನ ತ್ರಿಪುರಾದ ಅಗರ್ತಲಾಕ್ಕೆ ಬಂದಿದ್ದಾರೆ ಎನ್ನಲಾಗಿದೆ.
ಹಿಂಸಾಚಾರದಲ್ಲಿ ದೇಶಾದ್ಯಂತ ಸುಮಾರು 300ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರುವ ಶಂಕೆ ಇದೆ. ಈ ಹಿನ್ನೆಲೆಯಲ್ಲಿ ಭದ್ರತಾ ಕಾರಣಗಳಿಂದಾಗಿ ಬಾಂಗ್ಲಾ ದೇಶದ ಪ್ರಧಾನ ಮಂತ್ರಿ ಶೇಖ್ ಹಸೀನಾ ಅವರು ಸುರಕ್ಷಿತ ಸ್ಥಳಕ್ಕೆ ಪರಾರಿಯಾಗಿದ್ದಾರೆ. ಇನ್ನೂ ಶೇಖ್ ಹಸೀನಾ ಭಾರತಕ್ಕೆ ಬರ್ತಾರೆ ಅನ್ನೋ ಸುದ್ದಿ ಕೂಡ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಚರ್ಚೆಯಾಗುತ್ತಿದೆ.