newsics.com
ಬೆಂಗಳೂರು: ದಿಲ್ಲಿ ಪ್ರವಾಸದಲ್ಲಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸೋಮವಾರ ತಡರಾತ್ರಿ ಬೆಂಗಳೂರಿಗೆ ಆಗಮಿಸಿದ್ದಾರೆ.
ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮುಡಾ ಪ್ರಕರಣ ಸಂಬಂಧ ಇನ್ನೊಂದು ನೋಟಿಸ್ ನೀಡುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.
ಈ ಮೊದಲು ನೀಡಲಾಗಿದ್ದ 2 ನೋಟಿಸ್ಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿದ ಉತ್ತರ ಸಮರ್ಪಕವಾಗಿಲ್ಲ ಎಂಬ ಕಾರಣಕ್ಕಾಗಿ ಇನ್ನೊಂದು ನೋಟಿಸ್ ನೀಡುವ ಸಾಧ್ಯತೆಗಳಿವೆ ಎಂದು ಹೇಳಲಾಗಿದೆ.
ಇನ್ನೊಂದೆಡೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರದ ನಿಗದಿತ ಎಲ್ಲ ಕಾರ್ಯಕ್ರಮ ರದ್ದುಗೊಳಿಸಿದ್ದು, ಬೆಂಗಳೂರಿನಲ್ಲೇ ಇದ್ದು ರಾಜಭವನದಲ್ಲಿ ನಡೆಯುವ ಬೆಳವಣಿಗೆಯ ಬಗ್ಗೆ ದೃಷ್ಟಿಯಿಟ್ಟಿದ್ದಾರೆ. ಎನ್ಡಿಎ ಪಾದಯಾತ್ರೆ, ಕಾಂಗ್ರೆಸ್ನ ಜನಾಂದೋಲನ ಸಭೆಗಿಂತಲೂ ರಾಜ್ಯಪಾಲರ ಮುಂದಿನ ಹೆಜ್ಜೆಯೇ ಹೆಚ್ಚು ಮಹತ್ವ ಪಡೆದುಕೊಂಡಿದೆ.
ಈ ಮಧ್ಯೆ ಸಿಎಂ ಸಿದ್ದರಾಮಯ್ಯ ಮಂಗಳವಾರ ನಿಗದಿಯಾಗಿದ್ದ ಕಾರ್ಯಕ್ರಮಗಳನ್ನು ರದ್ದುಗೊಳಿಸಿದ್ದಾರೆ. ತುಂಗಭದ್ರಾ ನದಿಗೆ ಬಾಗಿನ ಸಮರ್ಪಿಸುವ ಕಾರ್ಯಕ್ರಮ ಈ ಹಿಂದೆ ನಿಗದಿಯಾಗಿತ್ತು. ಆದರೆ ಅವರು ಬೆಂಗಳೂರಿನಲ್ಲೇ ಇರಲಿದ್ದು, ಕಡತ ಪರಿಶೀಲನೆ ನಡೆಸಿದ ಬಳಿಕ ಸಾಯಂಕಾಲ ಮೈಸೂರಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಹಣೆ ಮೇಲೆ ಡಿ ಬಾಸ್ ಹೆಸರನ್ನ ಹಚ್ಚೆ ಹಾಕಿಸಿಕೊಂಡ ಅಭಿಮಾನಿ: ವಿಡಿಯೋ ನೋಡಿ
ಇನ್ನೋವಾ ಕಾರ್ ಖರೀದಿಸಿದ ಬಾಲ ನಟಿ : ಸಾಧನೆ ಅಂದ್ರೆ ಇದು ಎಂದು ಹಾಡಿ ಹೊಗಳಿದ ಅಭಿಮಾನಿಗಳು