Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಕುಸ್ತಿಗೆ ವಿದಾಯ ಹೇಳಿದ ವಿನೇಶ್ ಫೋಗಟ್, ಎಕ್ಸ್‌ನಲ್ಲಿ ಭಾವನಾತ್ಮಕ ಪೋಸ್ಟ್ ಮೂಲಕ ನಿರ್ಧಾರ ಪ್ರಕಟ
ದೇಶಪ್ರಮುಖವಿದೇಶ

ಕುಸ್ತಿಗೆ ವಿದಾಯ ಹೇಳಿದ ವಿನೇಶ್ ಫೋಗಟ್, ಎಕ್ಸ್‌ನಲ್ಲಿ ಭಾವನಾತ್ಮಕ ಪೋಸ್ಟ್ ಮೂಲಕ ನಿರ್ಧಾರ ಪ್ರಕಟ

Share
2 Min Read
SHARE

newsics.com

ನವದೆಹಲಿ: ಪ್ಯಾರಿಸ್ ಒಲಿಂಪಿಕ್ಸ್‌ನ 50 ಕೆಜಿ ಫ್ರೀಸ್ಟೈಲ್ ಕುಸ್ತಿ ಫೈನಲ್‌ನಲ್ಲಿ ಅನರ್ಹಗೊಂಡ ಬಳಿಕ ವಿನೇಶ್ ಫೋಗಟ್ ಕುಸ್ತಿಯಿಂದ ನಿವೃತ್ತಿ ಘೋಷಿಸಿದ್ದಾರೆ.

ಈ ಸಂಬಂಧ ಗುರುವಾರ ಬೆಳಗ್ಗೆ ಅವರು ಎಕ್ಸ್‌ನಲ್ಲಿ ಭಾವನಾತ್ಮಕ ಪೋಸ್ಟ್‌ ಹಂಚಿಕೊಂಡಿದ್ದು, ಇದರಲ್ಲಿ ತಮ್ಮ ನಿರ್ಧಾರವನ್ನು ಹಂಚಿಕೊಂಡಿದ್ದಾರೆ.
ಕುಸ್ತಿ ನನ್ನ ವಿರುದ್ಧದ ಪಂದ್ಯವನ್ನು ಗೆದ್ದಿದೆ, ನಾನು ಸೋತಿದ್ದೇನೆ… ನನ್ನ ಧೈರ್ಯ ಎಲ್ಲವೂ ಮುರಿದುಹೋಗಿದೆ, ನನಗೆ ಈಗ ಹೆಚ್ಚಿನ ಶಕ್ತಿ ಇಲ್ಲ. ಗುಡ್ಬೈ ರೆಸ್ಲಿಂಗ್ 2001-2024… ಎಂದು ಫೋಗಟ್ ತನ್ನ ಪೋಸ್ಟ್‌ನಲ್ಲಿ ಹೇಳಿದ್ದಾರೆ.
ಮಂಗಳವಾರ ರಾತ್ರಿ ನಡೆದ ಸೆಮಿಫೈನಲ್ ಪಂದ್ಯದಲ್ಲಿ ಫೋಗಾಟ್ 5-0 ಅಂತರದಲ್ಲಿ ಕ್ಯೂಬಾದ ಯುಸ್ನೆಲಿಸ್ ಗುಜ್ಮನ್ ಲೋಪೆಜ್ ಅವರನ್ನು ಸೋಲಿಸಿ ಚಿನ್ನದ ಪದಕಕ್ಕೆ ಲಗ್ಗೆ ಇಟ್ಟಿದ್ದರು. ಅವರು ಚಿನ್ನದ ಪದಕಕ್ಕಾಗಿ ಯುನೈಟೆಡ್ ಸ್ಟೇಟ್ಸ್ನ ಸಾರಾ ಆನ್ ಹಿಲ್ಡೆಬ್ರಾಂಡ್ ವಿರುದ್ಧ ಸ್ಪರ್ಧಿಸಲು ಸಿದ್ಧರಾಗಿದ್ದರು. ಆದರೆ ಅಷ್ಟರಲ್ಲಾಗಲೇ ಅವರ ತೂಕ ನಿಯಮದ ಮಿತಿಗಿಂತ 100 ಗ್ರಾಂ ಏರಿಕೆ ಆಗಿತ್ತು. ಹೀಗಾಗಿ ತೂಕದ ಮಿತಿ ಉಲ್ಲಂಘಿಸಿದ್ದಕ್ಕಾಗಿ ಬುಧವಾರ ಅವರನ್ನು ಪ್ಯಾರಿಸ್ ಒಲಿಂಪಿಕ್ಸ್ನಿಂದ ಅನರ್ಹಗೊಳಿಸಲಾಗಿತ್ತು.
ವಿನೇಶ್ ಫೋಗಟ್ ಅವರ ಅನರ್ಹತೆಗೆ ಭಾರತೀಯ ಒಲಿಂಪಿಕ್ ಅಸೋಸಿಯೇಷನ್ (ಐಒಎ) ಅಧ್ಯಕ್ಷೆ ಪಿಟಿ ಉಷಾ ಆಘಾತ ಮತ್ತು ಬೇಸರ ವ್ಯಕ್ತಪಡಿಸಿದ್ದಾರೆ. ಫೋಗಟ್ ದೈಹಿಕವಾಗಿ ಮತ್ತು ವೈದ್ಯಕೀಯವಾಗಿ ಉತ್ತಮವಾಗಿದ್ದರೂ ತೀವ್ರ ನಿರಾಸೆ ಹೊಂದಿದ್ದಾರೆ ಎಂದು ಅವರು ದೃಢಪಡಿಸಿದ್ದಾರೆ. ಪೋಗಟ್ ತಮ್ಮ ತೂಕವನ್ನು ನಿರ್ವಹಿಸಲು ಸಹಾಯಕ ಸಿಬ್ಬಂದಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂಬ ವಿಚಾರವನ್ನು ಉಷಾ ಗಮನಿಸಿದರು.

ವಿನೇಶ್ ಫೋಗಟ್ ಅವರನ್ನು ಅನರ್ಹಗೊಳಿಸಲಾಗಿದೆ ಎಂಬ ಸುದ್ದಿ ಕೇಳಿದ ನಂತರ, ನಾನು ಆಘಾತಕ್ಕೊಳಗಾಗಿದ್ದೇನೆ ಮತ್ತು ನಿರಾಶೆಗೊಂಡಿದ್ದೇನೆ. ನಾನು ವಿನೇಶ್ ಅವರನ್ನು ಭೇಟಿಯಾಗಲು ಇಲ್ಲಿಗೆ ಬಂದಿದ್ದೇನೆ. ಅವರು ದೈಹಿಕವಾಗಿ ಮತ್ತು ವೈದ್ಯಕೀಯವಾಗಿ ಚೆನ್ನಾಗಿದ್ದಾರೆ. ಮಾನಸಿಕವಾಗಿ ಅವರು ಬೇಸರದಲ್ಲಿದ್ದಾರೆ.ನಮ್ಮ ಸಹಾಯಕ ಸಿಬ್ಬಂದಿ ಅವರ ಜೊತೆಗಿದ್ದಾರೆ, ಸಹಾಯ ಮಾಡಲು ಪ್ರಯತ್ನಿಸುತ್ತಿದ್ದಾರೆ. ಆಕೆಯ ತೂಕ ಕಡಿಮೆಯಾಗಿದೆ ಎಂದು ಪಿಟಿ ಉಷಾ ಇದೇ ವೇಳೆ ತಿಳಿಸಿದ್ದಾರೆ.

ಇದಕ್ಕೂ ಮೊದಲು, ಭಾರತೀಯ ಒಲಿಂಪಿಕ್ ತಂಡದ ಮುಖ್ಯ ವೈದ್ಯಕೀಯ ಅಧಿಕಾರಿ ದಿನ್ಶಾ ಪರ್ದಿವಾಲಾ ಅವರು, ಸೆಮಿಫೈನಲ್ ಪಂದ್ಯದ ನಂತರ ಫೋಗಟ್ ತೂಕದ ಮಿತಿ 2.7 ಕೆಜಿಯಷ್ಟು ಹೆಚ್ಚಾಗಿದೆ ಎಂದು ಬಹಿರಂಗಪಡಿಸಿದ್ದರು. ಆಹಾರ ಮತ್ತು ನೀರಿನ ಸೇವನೆಯನ್ನು ನಿರ್ಬಂಧಿಸುವ ಮೂಲಕ ತೂಕ ಕಡಿಮೆ ಮಾಡಲು ಪ್ರಯತ್ನಿಸಲಾಗಿದೆ ಎಂದು ಅವರು ಸ್ಪಷ್ಟ ಪಡಿಸಿದ್ದರು.
ಫೋಗಟ್ ಬುಧವಾರ ತಮ್ಮ ಅನರ್ಹತೆಯ ನಂತರ ಕ್ರೀಡಾ ಮಧ್ಯಸ್ಥಿಕೆ ನ್ಯಾಯಾಲಯ ಸಿಎಎಸ್ಗೆ ಮೇಲ್ಮನವಿ ಕೂಡಾ ಸಲ್ಲಿಸಿದ್ದಾರೆ. IOA ಮೂಲದ ಪ್ರಕಾರ, ಫೋಗಟ್ ಸಿಎಎಸ್‌ಗೆ ಬೆಳ್ಳಿ ಪದಕವನ್ನು ನೀಡುವಂತೆ ವಿನಂತಿಸಿದ್ದಾರೆ. ಇಂದು ತೀರ್ಪು ಹೊರಬೀಳುವ ಸಾಧ್ಯತೆಯಿದ್ದು, ಅಷ್ಟರಲ್ಲೇ ಫೋಗಟ್ ವಿದಾಯ ಘೋಷಿಸಿದ್ದಾರೆ.

https://x.com/Phogat_Vinesh/status/1821332432701779982?t=IFV-eN4MY77IsC9O3djQlg&s=19

https://x.com/ANI/status/1821339559675748414?t=Jwpv2xs4fK5UTu5FqLeyBg&s=19

Paris Olympics ಕೂದಲೆಳೆ ಅಂತರದಲ್ಲಿ ಪದಕ ತಪ್ಪಿಸಿಕೊಂಡ ವೇಟ್‌ಲಿಫ್ಟರ್ ಮೀರಾಬಾಯಿ‌ ಚಾನು, ವಿಡಿಯೊ ನೋಡಿ

ಫ್ರೆಂಚ್ ಕ್ರೀಡಾಪಟುವಿನ ಪದಕದಾಸೆಗೆ ಮರ್ಮಾಂಗವೇ ಅಡ್ಡಿಯಾಯ್ತು! ವಿಡಿಯೊ ನೋಡಿ

ಶುಭೋದಯ, ಇಂದಿನ ಪಂಚಾಂಗ 08-08-2024 ಗುರುವಾರ, ಇವತ್ತೇನು ವಿಶೇಷ?

TAGGED:announced the decision through an emotional post on XVinesh Phogatwho bid farewell to wrestling
Share This Article
Facebook Twitter Copy Link Print
Previous Article Paris Olympics ಕೂದಲೆಳೆ ಅಂತರದಲ್ಲಿ ಪದಕ ತಪ್ಪಿಸಿಕೊಂಡ ವೇಟ್‌ಲಿಫ್ಟರ್ ಮೀರಾಬಾಯಿ‌ ಚಾನು, ವಿಡಿಯೊ ನೋಡಿ
Next Article ಚಿನ್ನ, ಬೆಳ್ಳಿ ಮತ್ತಷ್ಟು ಅಗ್ಗ: ಮುಂದುವರಿದ ಇಳಿಕೆಯ ಟ್ರೆಂಡ್

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?