newsics.com
ಹೋಶಿಯಾರ್ಪುರ(ಪಂಜಾಬ್): ಮಳೆ ಪ್ರವಾಹಕ್ಕೆ ಸಿಲುಕಿ ಒಂದೇ ಕುಟುಂಬದ 11 ಮಂದಿ ಕೊಚ್ಚಿ ಹೋದ ಘಟನೆ ಪಂಜಾಬ್ ಹಾಗೂ ಹಿಮಾಚಲ ಪ್ರದೇಶ ಗಡಿ ಭಾಗದಲ್ಲಿ ನಡೆದಿದೆ.
ಹೋಶಿಯಾರ್ಪುರ್ ಜಿಲ್ಲೆಯ ಜೆಜೋನ್ ಪಟ್ಟಣದ ಬಳಿ ಈ ಘಟನೆ ನಡೆದಿದೆ. ಕುಟುಂಬ ಪಂಜಾಬ್ ಗಡಿಯಿಂದ ಹಿಮಾಚಲ ಪ್ರದೇಶಕ್ಕೆ ಮದುವೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ವೇಳೆ ದುರ್ಘಟನೆ ನಡೆದು ಹಲವರು ದಾರುಣ ಅಂತ್ಯ ಕಂಡಿದ್ದಾರೆ.
ರಾವೈನ್ ಬಳಿ ಇರುವ ನದಿಯಲ್ಲಿ ಪ್ರವಾಹ ನೀರು ಉಕ್ಕಿ ಹರಿದಿದೆ. ಅಕ್ಕಪಕ್ಕದ ರಸ್ತೆ ಮೇಲೆ ಪ್ರವಾಹ ನೀರು ಹರಿದಿದೆ. ಸೇತುವೆ ಕೂಡ ಮುಳುಗುವ ಹಂತಕ್ಕೆ ಬಂದಿದೆ.
ಇದೇ ವೇಳೆ ಈ ದಾರಿಯಿಂದ ಸಾಗಿ ಬಂದ ಇನ್ನೋವಾ ಕಾರು ರಸ್ತೆಯಲ್ಲಿರುವ ನೀರು ಲೆಕ್ಕಿಸದೇ ಸಾಗಿದೆ. ಸ್ಥಳೀಯರು ಎಚ್ಚರಿಕೆ ನೀಡುತ್ತಿದ್ದರೂ ಕಾರು ನೇರವಾಗಿ ಸಾಗಿದೆ.
ಸ್ವಲ್ಪ ದೂರ ಸಾಗುತ್ತಿದ್ದಂತೆ ಪ್ರವಾಹ ನೀರು ಹೆಚ್ಚಾಗಿದೆ. ಕಾರು ಕೊಚ್ಚಿ ಹೋಗಿದೆ. ತಕ್ಷಣವೇ ಸ್ಥಳೀಯರು ನೆರವಿಗೆ ಧಾವಿಸಿದ್ದಾರೆ. ಕೊಚ್ಚಿ ಹೋಗುತ್ತಿದ್ದ ಕಾರಿನಿಂದ ಮಗುವನ್ನು ರಕ್ಷಿಸಿದ್ದಾರೆ.
ಕಾರಿನಲ್ಲಿದ್ದ 9 ಮಂದಿಯ ಮೃತದೇಹವನ್ನು ಹೊರಕ್ಕೆ ತೆಗೆಯಾಗಿದೆ. ಇನ್ನುಳಿದವರು ನಾಪತ್ತೆಯಾಗಿದ್ದಾರೆ. ನಾಪತ್ತೆಯಾದವರಿಗೆ ಶೋಧ ಕಾರ್ಯ ಮುಂದುವರಿದಿದೆ.
ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆ, ಭೂಕುಸಿತದಿಂದ ಹಲವು ಅನಾಹುತಗಳು ಸಂಭವಸಿದೆ. ಕೇರಳದ ವಯನಾಡು ದುರಂತ ವೇಳೆ ಹಿಮಾಚಲ ಪ್ರದೇಶದಲ್ಲೂ ಪ್ರವಾಹ ಹಾಗೂ ಭೂಕುಸಿತ ಸಂಭವಿಸಿತ್ತು.
https://x.com/hennysharma22/status/1822562595070480528?t=baaoXAYAy07nY7ZLY5M_3A&s=19
ಸೆ.1ರಿಂದ ಹೊಸ ಟೆಲಿಕಾಂ ನಿಯಮ ಜಾರಿ! ನಕಲಿ ಸಿಮ್ಕಾರ್ಡ್ 2 ವರ್ಷದ ವರೆಗೆ ಬ್ಲಾಕ್ಲಿಸ್ಟ್ಗೆ ಸೇರ್ಪಡೆಯಾಗುವ ಸಾಧ್ಯತೆ