newsics.com
ನಾಡಹಬ್ಬ ದಸರಾ ಮಹೋತ್ಸವದ ಗಜಪಯಣ ಆ.21ರಂದು ನಡೆಯಲಿದೆ. ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಸಿದ್ಧತೆ ಆರಂಭಿಸಿದೆ. ಸದ್ಯ ದಸರಾಗಾಗಿ 18 ಆನೆಗಳನ್ನು ಅರಣ್ಯ ಇಲಾಖೆ ಗುರುತಿಸಿದ್ದು 2 ತಿಂಗಳ ಮುಂಚಿತವಾಗಿ ಮೈಸೂರಿಗೆ ಗಜಪಡೆ ಆಗಮಿಸಲಿದೆ.
ಆಗಸ್ಟ್ 21ರಂದು ಮೈಸೂರಿಗೆ ಗಜಪಯಣ ನಿಗದಿ ಹಿನ್ನೆಲೆ ನಾಲ್ಕು ಹೆಚ್ಚುವರಿ ಅಂಬಾರಿ ಹೊರುವ ಜವಾಬ್ದಾರಿಯನ್ನು ಅಭಿಮನ್ಯು ಹೆಗಲಿಗಿದೆ. 14 ಆನೆಗಳ ಪೈಕಿ ಮೊದಲ ಹಂತದಲ್ಲಿ 9 ಆನೆಗಳು ಆಗಮಿಸಲಿದ್ದು ಎರಡನೇ ಹಂತದಲ್ಲಿ ಐದು ಆನೆಗಳನ್ನು ಕರೆ ತರಲು ತಯಾರಿ ನಡೆಯುತ್ತಿದೆ. ಮೊದಲ ಹಂತದಲ್ಲಿ ಕ್ಯಾಪ್ಟನ್ ಅಭಿಮನ್ಯು, ಭೀಮ, ಏಕಲವ್ಯ, ವರಲಕ್ಷ್ಮೀ, ಧನಂಜಯ, ಗೋಪಿ, ರೋಹಿತ, ಕಂಜನ್ ಆಗಮಿಸಲಿದ್ದು ಬಳಿಕ ಪ್ರಶಾಂತ, ಸುಗ್ರೀವ, ಮಹೇಂದ್ರ, ಲಕ್ಷ್ಮೀ, ಹಿರಣ್ಯ ಆಗಮಿಸಲಿದ್ದಾರೆ.
ಈ ಬಗ್ಗೆ ಮಾತನಾಡಿರುವ ಸಚಿವ ಈಶ್ವರ್ ಖಂಡ್ರೆ,ಈ ಬಾರಿಯೂ ಒಟ್ಟು 14 ಆನೆಗಳನ್ನು ವಿವಿಧ ಶಿಬಿರಗಳಿಂದ ಕರೆತರಲಾಗುತ್ತಿದೆ. ಮೊದಲ ತಂಡದ 9 ಆನೆಗಳಿಗೆ ಹುಣಸೂರು ತಾಲ್ಲೂಕಿನ ವೀರನಹೊಸಹಳ್ಳಿಯಲ್ಲಿ 21ರಂದು ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸಿ ಬೀಳ್ಕೊಡಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.