newsics.com
ಬೆಂಗಳೂರು: ರಾಜ್ಯದ ಆರು ರಂಗಾಯಣಗಳಿಗೆ ನಿರ್ದೇಶಕರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಸೋಮವಾರ ಈ ಆದೇಶ ಹೊರಡಿಸಿದ್ದು, ಈ ಮೂಲಕ ರಾಜ್ಯದ ರಂಗಭೂಮಿ ಚಟುವಟಿಕೆಗಳಿಗೆ ಚಾಲನೆ ನೀಡಿದ್ದಾರೆ.
ಮೈಸೂರು ರಂಗಾಯಣದ ನಿರ್ದೇಶಕರಾಗಿ ಸತೀಶ್ ತಿಪಟೂರು, ಧಾರವಾಡ ರಂಗಾಯಣದ ನಿರ್ದೇಶಕರಾಗಿ ರಾಜು ತಾಳಿಕೋಟೆ, ಶಿವಮೊಗ್ಗ ರಂಗಾಯಣದ ನಿರ್ದೇಶಕರಾಗಿ ಪ್ರಸನ್ನ ಡಿ. ಸಾಗರ, ಕಲಬುರ್ಗಿ ರಂಗಾಯಣದ ನಿರ್ದೇಶಕರಾಗಿ ಡಾ. ಸುಜಾತಾ ಜಂಗಮ ಶೆಟ್ಟಿ, ವೃತ್ತಿ ರಂಗಭೂಮಿ ರಂಗಾಯಣ, ದಾವಣಗೆರೆಗೆ ನಿರ್ದೇಶಕರಾಗಿ ಮಲ್ಲಿಕಾರ್ಜುನ ಕಡಕೋಳ, ಯಕ್ಷ ರಂಗಾಯಣ ಕಾರ್ಕಳದ ನಿರ್ದೇಶಕರಾಗಿ ವೆಂಕಟರಮಣ ಐತಾಳ ಅವರನ್ನು ನೇಮಕ ಮಾಡಲಾಗಿದೆ.
ರಂಗಾಯಣಗಳ ಕಾರ್ಯ ಚಟುವಟಿಕೆಗಳಿಗೆ ವೇಗ ಕೊಡಲು, ಹಾಗೂ ರಂಗಭೂಮಿಯ ಸರ್ವತೋಮುಖ ಬೆಳವಣಿಗೆಗೆ ಪೂರಕವಾಗುವಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಸೂಚಿಸಲಾಗಿದೆ. ಇದಲ್ಲದೆ ವಿವಿಧ ಅಕಾಡೆಮಿಗಳಲ್ಲಿ ಖಾಲಿ ಇದ್ದ ಸದಸ್ಯರ ನೇಮಕಾತಿ ಆದೇಶವನ್ನು ಸಹ ಹೊರಡಿಸಲಾಗಿದೆ ಎಂದು ಸಚಿವ ಶಿವರಾಜ ತಂಗಡಗಿ ಹೇಳಿದರು.
ಟಿಬಿ ಡ್ಯಾಂ ದುರಸ್ತಿ ಕಾರ್ಯಕ್ಕೆ ಒಂದಷ್ಟು ನೀರು ಖಾಲಿ ಮಾಡ್ಲೇಬೇಕು: ಡಿಸಿಎಂ