newsics.com
ಮೈಸೂರು: ಅಪರಾಧ ಪ್ರಕರಣಗಳಲ್ಲಿ ಆರೋಪಿಗಳ ಜತೆ ಸಂಪರ್ಕ, ಸಾರ್ವಜನಿಕರ ಆಸ್ತಿ ಕಳುವಿಗೆ ಪರೋಕ್ಷ ಸಹಾಯ, ದಾಖಲೆಗಳ ಸೋರಿಕೆ ಮಾಡುವ ಶಂಕೆ ಮುಂತಾದ ಹಲವು ಆರೋಪಗಳ ಹಿನ್ನಲೆಯಲ್ಲಿ ಸಸ್ಪೆಂಡ್ ಆಗಿದ್ದ ಮೈಸೂರು ಸಿಸಿಬಿ ಘಟಕದ ಮುಖ್ಯಪೇದೆಗೆ ಮುಖ್ಯಮಂತ್ರಿ ಪದಕ ಘೋಷಿಸಲಾಗಿದೆ!
ಒಂದು ತಿಂಗಳ ಹಿಂದೆ ಸಸ್ಪೆಂಡ್ ಆಗಿದ್ದ ಮುಖ್ಯಪೇದೆ ಸಲೀಂ ಪಾಷಾ ಹೆಸರನ್ನು ಇದೀಗ ಬಿಡುಗಡೆಯಾದ ಮುಖ್ಯಮಂತ್ರಿಗಳ ಪದಕದ ಪಟ್ಟಿಯಲ್ಲಿ ಸೇರಿರುವುದು ಅಚ್ಚರಿಗೆ ಕಾರಣವಾಗಿದೆ.
ಅಪರಾಧಿಗಳನ್ನು ಹಿಡಿಯಲು ಧೈರ್ಯ, ಶೌರ್ಯ, ಸಾಹಸಗಳನ್ನು ಮೆರೆದವರು, ಕರ್ತವ್ಯ ನಿಷ್ಠೆಯುಳ್ಳವರು, ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿದವರಿಗೆ ಮುಖ್ಯಮಂತ್ರಿಗಳ ಪದಕವನ್ನು ನೀಡಿ ಗೌರವಿಸಲಾಗುತ್ತದೆ. ಆದರೆ
2023ನೇ ಸಾಲಿಗೆ ಆಯ್ಕೆಯಾದವರ ಸಿಬ್ಬಂದಿ ಅಧಿಕಾರಿಗಳ ಪಟ್ಟಿಯಲ್ಲಿ ಹಲವು ಆರೋಪಗಳನ್ನು ಹೊತ್ತು ಸಸ್ಪೆಂಡ್ ಆಗಿರುವ ಪೊಲೀಸ್ ಮುಖ್ಯಪೇದೆ ಸಲೀಂ ಪಾಷಾ ಹೆಸರು ಪ್ರಕಟವಾಗಿದೆ.
ಮೇಟಗಳ್ಳಿ ಹಾಗೂ ವಿಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಕನ್ನ ಕಳುವು ಹಾಗೂ ಗಾಂಜಾ ಪ್ರಕರಣಗಳ ಆರೋಪಿಗಳ ಸಂಬಂಧಿಕರ ಜತೆ ಸಂಪರ್ಕ ಇಟ್ಟುಕೊಂಡಿರುವ ಬಗ್ಗೆ ಹಿರಿಯ ಅಧಿಕಾರಿಗಳ ಗಮನಕ್ಕೆ ಬಂದಿದೆ.ಸಮಾಜಘಾತುಕ ಶಕ್ತಿಗಳ ಜೊತೆ ಕೈಜೋಡಿಸಿ ಸಾರ್ವಜನಿಕರ ಸ್ವತ್ತು ಕಳುವಾಗಲು ಕಾರಣರಾಗಿರುತ್ತಾರೆ.
ಮುಂದಿನ ದಿನಗಳಲ್ಲಿ ಇಲಾಖೆಯ ಆಂತರಿಕ ಮತ್ತು ಗುಪ್ತಮಾಹಿತಿಗಳು ಸೋರಿಕೆಯಾಗಿ, ಸಾರ್ವಜನಿಕರ ಸ್ವತ್ತುಗಳು ಹೆಚ್ಚು ಹೆಚ್ಚಾಗಿ ಕಾಣೆಯಾಗುವ ಸಾಧ್ಯತೆಗಳು ಇರುವುದಾಗಿ ಕಾರಣ ನೀಡಿ ಸಲೀಂ ಪಾಷಾರನ್ನ ಸಸ್ಪೆಂಡ್ ಮಾಡಲಾಗಿತ್ತು.
ಹೀಗಿದ್ದೂ ಸಲೀಂ ಪಾಷಾ ಹೆಸರು ಮುಖ್ಯಮಂತ್ರಿಗಳ ಪದಕ ಗಳಿಸುವಲ್ಲಿ ಯಶಸ್ವಿಯಾಗಿರುವುದು ಇಲಾಖಾ ವ್ಯವಸ್ಥೆಯನ್ನೇ ಅನುಮಾನದಿಂದ ನೋಡುವಂತಾಗಿದೆ.
ಆಸ್ಪತ್ರೆಯಿಂದ ಮನೆಗೆ ಹೋಗುತ್ತಿದ್ದ ನರ್ಸ್ ಮೇಲೆ ಅತ್ಯಾಚಾರ ನಡೆಸಿ ಕೊಲೆ