newsics.com
ಬೆಂಗಳೂರು: ವರಮಹಾಲಕ್ಷ್ಮಿ ಹಬ್ಬ ಬಂದ್ರೆ ಸಾಕು, ಹೂ ಹಣ್ಣು ಸೇರಿದಂತೆ ತರಕಾರಿ ಬೆಲೆ ಗಗನಕ್ಕೇರಿದೆ.
ಇನ್ನು ಹಗಲು ರಾತ್ರಿ ಕಷ್ಟಪಟ್ಟು ಬೆಳೆದ ಹೂ, ಹಣ್ಣುಗಳಿಗೆ ಬಾರಿ ಡಿಮ್ಯಾಂಡ್ ಬಂದಿದೆ. ವರಮಹಾಲಕ್ಷ್ಮಿ ಹಬ್ಬ ರೈತರಿಗೆ ವರವಾದರೆ, ಗ್ರಾಹಕರಿಗೆ ಹೊರೆಯಾದಂತಾಗಿದೆ.
ಹೂಗಳಿಗೆ ಕೆ.ಜಿ ಸೇವಂತಿ, ಕೆಜಿ ರೋಜ್ ಬೆಲೆ ಇನ್ನೂರು ರೂಪಾಯಿಯಾದರೆ, ಕೆಜಿ ಚೆಂಡು ಹೂ ಬೆಲೆ ನೂರು ರೂಪಾಯಿ, ಇತ್ತ ಕನಕಾಂಬರ, ಕಾಕಡ ಬೆಲೆ ಐನೂರು ರೂಪಾಯಿ. ಜೊತೆಗೆ ಸುಗಂಧ ರಾಜನ ಇನ್ನೂರು ರೂಪಾಯಿಗೆ ಮಾರಾಟವಾಗುತ್ತಿದೆ.
ಹೂ. ಹಣ್ಣು, ತರಕಾರಿ ಸೇರಿದಂತೆ ಯಾವುದೇ ವಸ್ತು ಕೊಂಡರೂ ಕೈ ಸುಡುವಂತಾಗಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆ ಮಧ್ಯೆಯೂ ಹೂ ಹಣ್ಣು ತರಕಾರಿ ಬೆಲೆ ಏರಿಕೆಯಾಗಿರುವುದಕ್ಕೆ ಗ್ರಾಹಕರು ಬೇಸರ ವ್ಯಕ್ತಪಡಿಸಿದ್ದಾರೆ.