newsics.com
ದೇಶಾದ್ಯಂತ 78ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ-ಸಡಗರ ಗರಿಗೆದರಿದೆ.
ಸ್ವಾತಂತ್ರ್ಯೋತ್ಸವದ ಹಬ್ಬವನ್ನ ಅದ್ಧೂರಿಯಾಗಿ ಆಚರಣೆ ಮಾಡಲಾಗ್ತಿದೆ. ಎಲ್ಲೆಲ್ಲೂ ತ್ರಿವರ್ಣ ಧ್ವಜಗಳು ರಾರಾಜಿಸುತ್ತಿದೆ. ರಾಷ್ಟ್ರ ರಾಜಧಾನಿ ದೆಹಲಿ ಸೇರಿದಂತೆ ಇಡೀ ದೇಶವೇ ಸಡಗರದ ಅಲೆಯಲ್ಲಿ ಮಿಂದೇಳುತ್ತಿದೆ.
ದೆಹಲಿಯ ಕೆಂಪುಕೋಟೆ ಮೇಲೆ ಪ್ರಧಾನಿ ಮೋದಿ ಸತತ 11ನೇ ಬಾರಿ ಧ್ವಜಾರೋಹಣ ನೆರವೇರಿಸಿದ್ದಾರೆ. ದೆಹಲಿಯ ಕೆಂಪುಕೋಟೆ ಮೇಲೆ 78ನೇ ಸ್ವಾತಂತ್ರ್ಯ ಸಂಭ್ರಮಾಚರಣೆಯಲ್ಲಿ ಕೇಂದ್ರ ಸಚಿವರಾದ ಅಮಿತ್ ಶಾ, ರಾಜನಾಥ್ ಸಿಂಗ್, ಹೆಚ್ಡಿ ಕುಮಾರಸ್ವಾಮಿ, ಅಶ್ವಿನಿ ವೈಷ್ಣವ್, ನಿತಿನ್ ಗಡ್ಕರಿ, ನಿರ್ಮಲಾ ಸೀತಾರಾಮನ್, ಜೆ.ಪಿ.ನಡ್ಡಾ, ಶಿವರಾಜ್ ಸಿಂಗ್ ಚವ್ಹಾಣ್, ಜೈಶಂಕರ್, ವಿಪಕ್ಷ ನಾಯಕ ರಾಹುಲ್ ಗಾಂಧಿ, ಭದ್ರತಾ ಸಲಹೆಗಾರ ಅಜಿತ್ ದೋವಲ್ ಸೇರಿ ಹಲವು ಗಣ್ಯರು ಭಾಗಿಯಾಗಿದ್ದಾರೆ.