newsics.com
ಬೆಂಗಳೂರು: ಮುಡಾ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ರಾಜ್ಯಪಾಲರು ಅನುಮತಿ ನೀಡಿದ್ದಾರೆ.
ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ಅನುಮತಿ ನೀಡಿದ್ದಾರೆ ಈ ಸಂಬಂಧ ಅಗತ್ಯ ಆದೇಶ ದಾಖಲೆಗಳನ್ನು ಕಚೇರಿಗೆ ರವಾನಿಸಿದ್ದಾರೆ ಎಂದು ಮುಖ್ಯಮಂತ್ರಿಯವರ ಕಚೇರಿ ಮೂಲಗಳು ಖಚಿತಪಡಿಸಿವೆ.
ಸಿದ್ದರಾಮಯ್ಯ ವಿರುದ್ಧ ಪ್ರಕರಣ ದಾಖಲಿಸಲು ಅನುಮತಿ ಕೋರಿ ಜುಲೈ 26ರಂದು ಟಿ.ಜೆ. ಅಬ್ರಹಾಂ ಅವರು ರಾಜ್ಯಪಾಲರಿಗೆ ಅರ್ಜಿ ಸಲ್ಲಿಸಿದ್ದರು. ಮರುದಿನವೇ ರಾಜ್ಯಪಾಲರು ಸಿಎಂಗೆ ನೋಟಿಸ್ ನೀಡಿದ್ದರು. ಇದಕ್ಕೆ ಸಿಎಂ ಆದಿಯಾಗಿ ಎಲ್ಲ ಸಚಿವರು ವಿರೋಧ ವ್ಯಕ್ತಪಡಿಸಿದ್ದರು. ಅಲ್ಲದೆ, ಸಂಪುಟ ಸಭೆಯಲ್ಲೂ ಈ ಬಗ್ಗೆ ನಿರ್ಣಯ ಕೈಗೊಳ್ಳಲಾಗಿತ್ತು.
ಹೋಮ, ಹವನದ ಬಳಿಕ ಕಾಂತಾರ, KGFಗೆ ಬಂತು ನ್ಯಾಷನಲ್ ಅವಾರ್ಡ್ ಸಿಕ್ತಂತೆ…! ಸಿನಿಪ್ರಿಯರ ಮಾತು
ಮಾರುತಿ ಸುಜುಕಿಯ ಮೇಡ್ ಇನ್ ಇಂಡಿಯಾ ಕಾರ್ಗೆ ಜಪಾನ್ನಲ್ಲೂ ಭಾರೀ ಬೇಡಿಕೆ