newsics.com
ಮುಂಬೈ: ಬಿಸ್ಕೆಟ್ ತಿಂದ ಕಾರಣಕ್ಕೆ ಸುಮಾರು 80 ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲಾದ ಘಟನೆ ಮಹಾರಾಷ್ಟ್ರದ ಛತ್ರಪತಿ ಶಂಭಾಜಿನಗರ ಜಿಲ್ಲೆಯಲ್ಲಿ ನಡೆದಿದೆ. ಪೌಷ್ಟಿಕಾಂಶ ಆಹಾರ ವಿತರಣೆ ಕಾರ್ಯಕ್ರಮಲ್ಲಿ ನೀಡಲಾದ ಬಿಸ್ಕೆಟ್ ತಿಂದ ಕೆಕೆಟ್ ಜಲಗಾಂವ್ ಗ್ರಾಮದ 80 ವಿದ್ಯಾರ್ಥಿಗಳು ವಾಂತಿ ಬೇಧಿಯಿಂದ ನರಳಾಡಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಬಿಸ್ಕೆಟ್ ತಿಂದ ಮೇಲೆ ವಾಂತಿ ಬೇಧಿಯಿಂದ ಮಕ್ಕಳು ಬಳಲುತ್ತಿರುವುದು ಗಮನಕ್ಕೆ ಬಂದ ಮೇಲೆ ಸ್ಥಳೀಯ ಆಡಳಿತ ಹಾಗೂ ಗ್ರಾಮದ ಹಿರಿಯರೆಲ್ಲರೂ ಸೇರಿ ವಾಹನಗಳ ವ್ಯವಸ್ಥೆ ಮಾಡಿ ಮಕ್ಕಳನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ.
ಇನ್ನು ಉಳಿದ ಕೆಲವು ಮಕ್ಕಳ ಪರಿಸ್ಥಿತಿ ಗಂಭೀರವಾದ ಕಾರಣ ಅವರನ್ನು ಛತ್ರಪತಿ ಶಂಭಾಜಿನಗರ ಸಿವಿಲ್ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ವೈದ್ಯಾಧಿಕಾರಿ ಹೇಳಿದ್ದಾರೆ. ಗ್ರಾಮದ ಶಾಲೆಯಲ್ಲಿ ಒಟ್ಟು 296 ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಸದ್ಯ ಘಟನೆ ಕುರಿತು ಪೊಲೀಸ್ ಅಧಿಕಾರಿಗಳು ತನಿಖೆಯನ್ನು ಕೈಗೆತ್ತಿಕೊಂಡಿದ್ದಾರೆ.