newsics.com
ಬೆಂಗಳೂರು: ಅಗತ್ಯವಿದ್ದರೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರನ್ನು ಮುಲಾಜಿಲ್ಲದೆ ಬಂಧನಕ್ಕೊಳಪಡಿಸುತ್ತೇವೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಆಲಮಟ್ಟಿಗೆ ಬಾಗಿನ ಅರ್ಪಿಸಲು ತೆರಳುವ ಮೊದಲು ಬುಧವಾರ ಸುದ್ದಿಗಾರರ ಜತೆ ಮಾತನಾಡಿದ ಸಿಎಂ, ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರನ್ನು ಬಂಧಿಸುವ ಅಗತ್ಯಬಿದ್ದರೆ ಮುಲಾಜಿಲ್ಲದೆ ಬಂಧಿಸುತ್ತೇವೆ. ಆದರೆ ಈಗ ಇನ್ನೂ ಬಂಧಿಸುವ ಸನ್ನಿವೇಶ ಬಂದಿಲ್ಲ ಎಂದು ಹೇಳಿದರು.
ಕುಮಾರಸ್ವಾಮಿಯವರು ಈಗಲೇ ಹೆದರಿದ್ದಾರೆ. ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಜ್ಯಪಾಲರು ತನಿಖೆಗೆ ಅನುಮತಿ ನೀಡಬಹುದು ಎಂಬ ಭಯ ಅವರನ್ನು ಕಾಡುತ್ತಿದೆ. ಅವರ ವಿರುದ್ಧ ಲೋಕಾಯುಕ್ತ ಎಸ್.ಐ.ಟಿ ಯವರು ತನಿಖಾ ವರದಿ ನೀಡಿ ಅನುಮತಿ ಕೋರಿದ್ದಾಗ್ಯೂ ರಾಜ್ಯಪಾಲರಿಂದ ಯಾವುದೇ ಕ್ರಮವಾಗದ ಕಾರಣ, ಎಸ್.ಐ.ಟಿ ಮತ್ತೊಮ್ಮೆ ಅರ್ಜಿ ಸಲ್ಲಿಸಿದೆ.
ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಪ್ರಕರಣದಲ್ಲಿ ವಿಳಂಬ ಧೋರಣೆ ಅನುಸರಿಸುತ್ತಿರುವ ರಾಜ್ಯಪಾಲರು, ನನ್ನ ವಿರುದ್ದ ಮಾತ್ರ ಯಾವುದೇ ತನಿಖಾ ವರದಿಯನ್ನು ಆಧರಿಸದೇ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದಾರೆ. ಇದು ತಾರತಮ್ಯವಲ್ಲದೆ ಮತ್ತೇನು ಎಂದು ಪ್ರಶ್ನಿಸಿದರು.
ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಮಾರಸ್ವಾಮಿ ದಾಖಲಾತಿ ಬಿಡುಗಡೆ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಈ ವಿಚಾರದ ಬಗ್ಗೆ ತನಗೆ ಮಾಹಿತಿಯಿಲ್ಲ. ಕುಮಾರಸ್ವಾಮಿ ಬಾಯಿಗೆ ಬಂದಂತೆ ಮಾತನಾಡುತ್ತಾರೆ. ಅವರ ಮಾತುಗಳು ಹಿಟ್ ಅಂಡ್ ರನ್ನಂತೆ ಇರುತ್ತವೆ ಎಂದರು.
ಸಿದ್ದು ರಾಜೀನಾಮೆಗೂ ಮುನ್ನವೇ ಶುರುವಾಯ್ತು ಸಿಎಂ ಕುರ್ಚಿ ಚರ್ಚೆ! ಯಾರಾಗ್ತಾರೆ ಮುಂದಿನ ಮುಖ್ಯಮಂತ್ರಿ?
ಕಾಂಗ್ರೆಸ್ಸಿಗರ ತೀವ್ರ ಆಕ್ರೋಶ: ರಾಜ್ಯಪಾಲರಿಂದ ಬುಲೆಟ್ಪ್ರೂಫ್ ಕಾರು ಬಳಕೆ
ಲಿಪ್ ಲಾಕ್ ಮಾಡುವಾಗ ಪ್ರಿಯತಮೆ ಬಾಯಿಗೇ ವಾಂತಿ ಮಾಡಿದ ಪ್ರಿಯಕರ! ವೈರಲ್ ವಿಡಿಯೋ ನೋಡಿ