newsics.com
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ , ಪವಿತ್ರಾ ಗೌಡ ಹಾಗೂ ಗ್ಯಾಂಗ್ಗೆ ಮತ್ತೊಂದು ಮಹಾ ಸಂಕಷ್ಟ ಎದುರಾಗಿದೆ.
ಹತ್ಯೆಯಲ್ಲಿ ದರ್ಶನ್ ನೇರವಾಗಿ ಭಾಗಿಯಾಗಿರೋ ಬಗ್ಗೆ ಪ್ರಬಲ ಸಾಕ್ಷಿಗಳು ಪೊಲೀಸರಿಗೆ ಸಿಕ್ಕಿವೆ ಎನ್ನಲಾಗಿದೆ. ಈ ಆಧಾರದ ಮೇಲೆ ಎ2 ಆಗಿದ್ದ ದರ್ಶನ್ ಅವರನ್ನು ಎ1 ಮಾಡಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದೆ. ಜೊತೆಗೆ ವಿನಯ್, ಪವನ್ ಹಾಗೂ ಪ್ರದೂಷ್ ಕೂಡ ದರ್ಶನ್ ನಂತರ ಬರೋ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಎಫ್ ಎಸ್ ಎಲ್ ಅಧಿಕಾರಿಗಳ ಮೊಬೈಲ್ ರಿಟ್ರೀವ್ ವೇಳೆ ಸ್ಫೋಟಕ ವಿಚಾರ ಬಯಲಾಗಿದೆ. ಎರಡು ಮೊಬೈಲ್ ಫೋನ್ನಲ್ಲಿ ರೇಣುಕಾಸ್ವಾಮಿಯ ನಾಲ್ಕು ಫೋಟೋಗಳು ಪತ್ತೆಯಾಗಿವೆ ಎನ್ನಲಾಗಿದೆ.
ಹಲ್ಲೆ ಬಳಿಕ ರೇಣುಕಾಸ್ವಾಮಿಯನ್ನು ಮಲಗಿಸಿರೋ ಫೋಟೋ, ಹಲ್ಲೆಗೊಳಗಾದ ಬಳಿಕ ರಕ್ತದ ಮಡುವಿನಲ್ಲಿ ರೇಣುಕಾಸ್ವಾಮಿ ಇರುವ 2 ಫೋಟೋಗಳು ಪತ್ತೆಯಾಗಿವೆಯಂತೆ. ಜೊತೆಗೆ ಆರೋಪಿಗಳು ಹಲ್ಲೆ ಮಾಡುವಾಗ ರೇಣುಕಾಸ್ವಾಮಿ ಕೈ ಮುಗೀತಾ ಇರೋ ಫೋಟೋ ಸಿಕ್ಕಿವೆ ಎನ್ನಲಾಗಿದೆ.