newsics.com
ಬೆಂಗಳೂರು:ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್ಗೆ ರಾಜಾತಿಥ್ಯ ಸಿಗುತ್ತಿರುವುದಕ್ಕೆ ರೇಣುಕಾಸ್ವಾಮಿ ತಂದೆ ಕಾಶಿನಾಥಯ್ಯ ಶಿವನಗೌಡರ್ ಅಸಮಾಧಾನ ಹೊರಹಾಕಿದ್ದಾರೆ.
ಯಾರಾದರೂ ತಪ್ಪು ಮಾಡಿದ್ದರೆ ಶಿಕ್ಷೆಯಾಗಲಿ, ಮಾಧ್ಯಮಗಳು ಎಲ್ಲವನ್ನು ಬಯಲಿಗೆ ತರುತ್ತಿವೆ ಎಂದ ಅವರು, ಪೊಲೀಸರು ಮತ್ತು ಸರ್ಕಾರದ ಮೇಲೆ ನಂಬಿಕೆ ಇದೆ. ಪ್ರಕರಣವನ್ನು ಸಿಬಿಐ ತನಿಖೆಗೆ ಕೊಟ್ಟಿದ್ದರೆ ವಾಸಿ ಎಂದು ಈಗ ನನಗೆ ಅನಿಸುತ್ತಿದೆ. ಇದನ್ನು ನೋಡಿ ನಮಗೆ ಶಾಕ್ ಆಯ್ತು, ಈ ಬಗ್ಗೆಯೂ ಸಮಗ್ರವಾಗಿ ತನಿಖೆ ಆಗಲಿ, ಎಲ್ಲಿ ತಪ್ಪಾಗಿದೆ ಎಂದು ಪರಿಶೀಲನೆ ಮಾಡಲಿ ಎಂದು ಆಗ್ರಹಿಸಿದರು.
ಫೋಟೊ ನೋಡಿದರೆ ಅತನಿಗೆ, ತಪ್ಪು ಮಾಡಿದ್ದೇನೆ ಎಂಬ ಭಾವನೆ ಇಲ್ಲ. ಈ ಘಟನೆ ನೋಡಿ ನನಗೆ ಪರಮಾಶ್ಚರ್ಯ ಆಗಿದೆ. ಜೈಲು ಜೈಲಾಗಿರಬೇಕು, ಮತ್ತೊಂದು ಆಗಿರಬಾರ್ದು. ಕುರ್ಚಿ ಮೇಲೆ ಕುಳಿತು ಚಹ , ಸಿಗರೇಟ್ ಹಿಡಿದು ರೆಸಾರ್ಟ್ನಲ್ಲಿ ಕುಳಿತಂತೆ ಕುಳಿತಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ತಪ್ಪಿತಸ್ಥರಿಗೆ ಶಿಕ್ಷೆ ಆಗುತ್ತದೆ ಎಂದಿದ್ದಾರೆ, ಪೊಲೀಸರ ಮೇಲೆಯೂ ನಮಗೆ ಪೂರ್ಣ ನಂಬಿಕೆ ಇದೆ. ಪ್ರಕರಣದಲ್ಲಿ ಸರ್ಕಾರ ನಿರ್ದಾಕ್ಷಿಣ್ಯವಾಗಿ ತನಿಖೆ ಮಾಡಬೇಕು ಎಂದರು.