newsics.com
ತೆಲಂಗಾಣ: ಮಕ್ಕಳು ಹೆತ್ತ ತಾಯಿಯ ಅಸ್ತಿಯನ್ನು ಕಬಳಿಸಿ, ಆಕೆಗೆ ಸರಿಯಾಗಿ ಊಟ ನೀಡದೆ ರಾಕ್ಷಸಿ ವರ್ತನೆಯನ್ನು ತೋರಿದ್ದಾರೆ. ಮಕ್ಕಳು ಕೊಡುವ ಕಷ್ಟವನ್ನು ಸಹಿಸಲಾರದೆ ಆ ತಾಯಿ ನಾಲ್ವರು ಪುತ್ರರ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.
ತೆಲಂಗಾಣದ ಕರೀಂನಗರ ಜಿಲ್ಲೆಯ ತಿಮ್ಮಾಪುರ ಮಂಡಲದ ಅಳುಗುನೂರು ಗ್ರಾಮದಲ್ಲಿ ನಡೆದಿದ್ದು, ಮಕ್ಕಳು ಸರಿಯಾಗಿ ಊಟ ಕೊಡುತ್ತಿಲ್ಲವೆಂದು ವೃದ್ಧ ತಾಯಿ ಪುತ್ರರ ವಿರುದ್ಧ ಠಾಣೆ ಮೆಟ್ಟಿಲೇರಿದ್ದಾರೆ.
ನನ್ಗೆ ನಾಲ್ವರು ಪುತ್ರರಿದ್ದು ಅವರಿಗೆಲ್ಲಾ ಮದುವೆ ಮಾಡಿ, ನನ್ನ ಆಸ್ತಿಯನ್ನೆಲ್ಲಾ ಅವರ ಹೆಸರಿಗೆ ಬರೆದುಕೊಟ್ಟಿದ್ದೇನೆ. ಆದ್ರೆ ಅವರು ನನ್ನನ್ನು ಪುಟ್ಟ ಗುಡಿಸಲಿನಲ್ಲಿಟ್ಟು ಸರಿಯಾಗಿ ಊಟ ಕೂಡಾ ನೀಡುತ್ತಿಲ್ಲ ಎಂದು ಪೊಲೀಸರಿಗೆ ದೂರನ್ನು ನೀಡಿದ್ದಾರೆ.