newsics.com
ದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಿಆರ್ಎಸ್ ಎಂಎಲ್ಸಿ ಕೆ ಕವಿತಾ ಅವರಿಗೆ ಸುಪ್ರೀಂಕೋರ್ಟ್ ಇಂದು ಜಾಮೀನು ಮಂಜೂರು ಮಾಡಿದೆ.
ತೆಲಂಗಾಣ ಮಾಜಿ ಸಿಎಂ ಕೆ.ಚಂದ್ರಶೇಖರ್ ಅವರ ಪುತ್ರಿ ಕೆ.ಕವಿತಾ ಮಾರ್ಚ್ 15ರಿಂದ ಬಂಧನದಲ್ಲಿದ್ದರು. ವಿಚಾರಣೆಯ ವೇಳೆ, ನ್ಯಾಯಮೂರ್ತಿಗಳಾದ ಬಿಆರ್ ಗವಾಯಿ ಮತ್ತು ಕೆವಿ ವಿಶ್ವನಾಥನ್ ಅವರಿದ್ದ ಸುಪ್ರೀಂಕೋರ್ಟ್ ಪೀಠವು, ದೆಹಲಿಯ ಅಬಕಾರಿ ನೀತಿ ಹಗರಣದಲ್ಲಿ ಕೆ ಕವಿತಾ ಭಾಗಿಯಾಗಿದ್ದಾರೆ ಎಂಬುದನ್ನು ಸಾಬೀತುಪಡಿಸಲು ಯಾವ ಸಾಕ್ಷ್ಯ ಇದೆ ಎಂಬುದನ್ನು ತೋರಿಸಲು ಜಾರಿ ನಿರ್ದೇಶನಾಲಯ ಮತ್ತು ಸಿಬಿಐಗೆ ಕೇಳಿದೆ
ದೆಹಲಿ ಲಿಕ್ಕರ್ ಹಗರಣದಲ್ಲಿ ಜಾರಿ ನಿರ್ದೇಶನಾಲಯ ಮತ್ತು ಸಿಬಿಐ ಕೇಸಿಗೆ ಸಂಬಂಧಪಟ್ಟಂತೆ ಕವಿತಾಗೆ ಜಾಮೀನು ಸಿಕ್ಕಿದೆ. ದೆಹಲಿ ಅಕ್ರಮ ಲಿಕ್ಕರ್ ಹಗರಣದಲ್ಲಿ ಕಳೆದ ಮಾರ್ಚ್ 15ರಂದು ವಿಧಾನ ಪರಿಷತ್ ಸದಸ್ಯೆ ಕೆ ಕವಿತಾ ಬಂಧಿಸಲ್ಪಟ್ಟಿದ್ದರು.