newsics.com
ಪರಪ್ಪನ ಅಗ್ರಹಾರದಲ್ಲಿ ರಾಯಲ್ ಟ್ರೀಟ್ಮೆಂಟ್ ತೆಗೆದುಕೊಂಡು ಬಿಂದಾಸ್ ಆಗಿದ್ದ ನಟ ದರ್ಶನ್ಗೆ ಕೋರ್ಟ್ ಶಾಕ್ ಕೊಟ್ಟಿದೆ. ದರ್ಶನ್ನನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡುವಂತೆ ಆದೇಶ ಹೊರಡಿಸಲಾಗಿದೆ. ಕೆಲ ಆರೋಪಿಗಳನ್ನು ಸಹ ಇತರೆ ಜೈಲಿಗೆ ಶಿಫ್ಟ್ ಮಾಡಲು ಸೂಚಿಸಲಾಗಿದೆ.
ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯದ ಫೋಟೋ ವೈರಲ್ ಆದ ಹಿನ್ನೆಲೆ ಎಫ್ಐಆರ್ ದಾಖಲಾಗಿ ತನಿಖೆ ಕೂಡ ನಡೆಸಲಾಗ್ತಿದೆ. ಇದೇ ವೇಳೆ ದರ್ಶನ್ನನ್ನು ಬೆಂಗಳೂರಿನ ಸೆಂಟ್ರಲ್ ಜೈಲಿನಿಂದ ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲು ಆದೇಶ ಹೊರಡಿಸಲಾಗಿದೆ. ಈ ಬಗ್ಗೆ ನಿನ್ನೆ ರಾತ್ರಿ ಡಿಜಿಪಿ ಮಾಲಿನಿ ಕೃಷ್ಣಮೂರ್ತಿ ಸೀಕ್ರೆಟ್ ಮೀಟಿಂಗ್ ನಡೆಸಿದ್ದರು.
ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ಆರೋಪಿಗಳನ್ನು ಬೇರೆ ಬೇರೆ ಜೈಲಿಗೆ ಶಿಫ್ಟ್ ಮಾಡುವಂತೆ 24ನೇ ಎಸಿಎಂಎಂ ನ್ಯಾಯಾಲಯ ಆದೇಶ ಹೊರಡಿಸಿದೆ. ಚೀಫ್ ಸೂಪರಿಡೆಂಟ್ ರಿಂದ ನ್ಯಾಯಾಲಯಕ್ಕೆ ಮನವಿ ಮಾಡಲಾಗಿತ್ತು. ಇದೀಗ ಕೋರ್ಟ್ ಆದೇಶ ಹೊರಡಿಸಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದ 2ನೇ ಆರೋಪಿ ದರ್ಶನ್ನನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಿದ್ದಾರೆ. ಆರೋಪಿ ಪವನ್ , ರಾಘವೇಂದ್ರ ನಂದೀಶ್ ನನ್ನು ಮೈಸೂರು ಜೈಲಿಗೆ ಶಿಫ್ಟ್ ಮಾಡಲಿದ್ದಾರೆ. ಆರೋಪಿ ಜಗದೀಶ್ ಅವರನ್ನು ಶಿವಮೊಗ್ಗಕ್ಕೆ ಹಾಗೂ ಧನರಾಜ್ನನ್ನು ಧಾರವಾಡ ಜೈಲಿಗೆ ಸ್ಥಳಾಂತರಿಸಲು ಪೊಲೀಸರು ಸಿದ್ಧತೆ ಮಾಡಿಕೊಳ್ತಿದ್ದಾರೆ.