newsics.com
ಇತ್ತೀಚಿನ ದಿನಗಳಲ್ಲಿ ಸೈಬರ್ ವಂಚನೆ ಪ್ರಕರಣಗಳು ಹೆಚ್ಚಾಗುತ್ತಿವೆ. ಫೇಸ್ಬುಕ್, ಇನ್ಸ್ಟಾಗ್ರಾಂ ಸೇರಿದಂತೆ ಹಲವೆಡೆ ಫೇಕ್ ಖಾತೆಗಳು ಕ್ರಿಯೇಟ್ ಮಾಡಿ ಫ್ರೆಂಡ್ ರಿಕ್ವೆಸ್ಟ್ ಕಳುಹಿಸಿ ಬಳಿಕ ಹಣ ದೋಚುವ ಪ್ರಯತ್ನಗಳು ನಡೆಯುತ್ತಿವೆ.
ಆದರೆ ಸುಪ್ರೀಂಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರನ್ನೂ ಕೂಡ ಇದು ಬಿಟ್ಟಿಲ್ಲ. ವ್ಯಕ್ತಿಯೊಬ್ಬ ತಾನು ಸಿಜೆಐ ಚಂದ್ರಚೂಡ್ ಎಂದು ಹೇಳಿಕೊಂಡು ವಂಚನೆ ಮಾಡಲು ಯತ್ನಿಸಿರುವ ಘಟನೆ ಬೆಳಕಿಗೆ ಬಂದಿದೆ. ನಾನು ಸಿಜೆಐ ಚಂದ್ರಚೂಡ್ ಇಂದು ಪ್ರಮುಖ ಮೀಟಿಂಗ್ವೊಂದಕ್ಕೆ ಅರ್ಜೆಂಟ್ ಆಗಿ ಹೋಗಬೇಕಿದೆ, ಕ್ಯಾಬ್ಗಾಗಿ 500 ರೂ. ಕೊಡುವಿರಾ, ನಾನು ನ್ಯಾಯಾಲಯಕ್ಕೆ ಹೋದ ತಕ್ಷಣ ಹಿಂದಿರುಗಿಸುತ್ತೇನೆ ಎಂದು ಕೇಳಿರುವಂತೆ ಸಂದೇಶ ಬಂದಿತ್ತು.
ವೈರಲ್ ಆಗುತ್ತಿರುವ ಸ್ಕ್ರೀನ್ಶಾಟ್ ಪ್ರಕಾರ, ವಂಚಕ ತನ್ನನ್ನು ತಾನು ಸಿಜೆಐ ಚಂದ್ರಚೂಡ್ ಎಂದು ಹೇಳಿಕೊಂಡು ವ್ಯಕ್ತಿಯೊಬ್ಬನಿಗೆ 500 ರೂ. ಬೇಕೆಂದು ಸಂದೇಶ ಕಳುಹಿಸಿದ್ದಾನೆ. ಈ ಸಂಬಂಧ ಸಿಜೆಐ ಚಂದ್ರಚೂಡ್ ಅವರ ಸೂಚನೆ ಮೇರೆಗೆ ಆಗಸ್ಟ್ 27ರಂದು ಸೈಬರ್ ಕ್ರೈಂ ಸೆಲ್ನಲ್ಲಿ ಸೂರು ದಾಖಲಿಸಲಾಗಿದೆ.