newsics.com
ನಟ ದರ್ಶನ್ ಬಂದ ವಿಚಾರ ಕೇಳಿ ಬಳ್ಳಾರಿಯ ಕೆಲ ಖೈದಿಗಳು ಸಂಭ್ರಮಿಸಿದ್ದರು. ದರ್ಶನ್ ಎಲ್ಲಾದರೂ ನೋಡಲು ಸಿಗಬಹುದು ಎಂದು ಅನೇಕರು ಅಂದುಕೊಂಡಿದ್ದರು. ಆದರೆ, ಈಗ ಅವರಿಗೆ ದರ್ಶನ್ನಿಂದಲೇ ಸಂಕಷ್ಟ ಎದುರಾಗಿದೆ. ದರ್ಶನ್ ಬರುತ್ತಿದ್ದಂತೆ ಜೈಲ್ ಒಳಭಾಗದಲ್ಲಿದ್ದ ಕ್ಯಾಂಟೀನ್ ಕ್ಲೋಸ್ ಮಾಡಿಸಲಾಗಿದೆ. ಹೀಗಾಗಿ, ಜೈಲಿನಲ್ಲಿ ಏನು ಕೊಡುತ್ತಾರೋ ಅದನ್ನೇ ತಿಂದು ಬದುಕಬೇಕಾದ ಪರಿಸ್ಥಿತಿ ಬಂದೊದಗಿದೆ.
ಒಪ್ಪಿಗೆ ಇರುವ ಕೆಲ ವಸ್ತುಗಳನ್ನು ಕ್ಯಾಂಟೀನ್ನಲ್ಲಿ ಇಡಲಾಗುತ್ತಿತ್ತು. ಇದನ್ನು ಖೈದಿಗಳು ಖರೀದಿ ಮಾಡುತ್ತಿದ್ದರು. ಈಗ ಕ್ಯಾಂಟೀನ್ ಇಲ್ಲದೆ ಕೇವಲ ಜೈಲು ಊಟ ಮಾಡುವ ಪರಿಸ್ಥಿತಿ ಬಂದೊದಗಿದೆ. ದರ್ಶನ್ ಅವರು ಬೆಂಗಳೂರಿನ ಜೈಲಿನಲ್ಲಿ ಇದ್ದಾಗ ಅವರಿಗೆ ಸಾಕಷ್ಟು ಸೌಕರ್ಯ ಮಾಡಿಕೊಡಲಾಗಿತ್ತು. ಹೀಗಾಗಿ, ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಗಿದೆ. ಇಲ್ಲಿ ಆ ರೀತಿ ಆಗಬಾರದು ಎನ್ನುವ ಕಾರಣಕ್ಕೆ ಎಚ್ಚರಿಕೆ ವಹಿಸಲಾಗುತ್ತಿದೆ.