newsics.com
ಮಹಾರಾಜ ಟ್ರೋಫಿಯಲ್ಲಿ ನಡೆದ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಬೆಂಗಳೂರು ಬ್ಲಾಸ್ಟರ್ಸ್ ಹಾಗೂ ಗುಲ್ಬರ್ಗಾ ಮಿಸ್ಟಿಕ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಗುಲ್ಬರ್ಗಾ ತಂಡವನ್ನು 9 ವಿಕೆಟ್ಗಳಿಂದ ಮಣಿಸಿದ ಬೆಂಗಳೂರು ತಂಡ ಟೂರ್ನಿಯಲ್ಲಿ ಮೊದಲ ತಂಡವಾಗಿ ಫೈನಲ್ ಪ್ರವೇಶಿಸಿದೆ. ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಗುಲ್ಬರ್ಗಾ ತಂಡ ಪೂರ್ಣ 20 ಓವರ್ಗಳನ್ನು ಆಡಲಾಗದೆ 19.5 ಓವರ್ಗಳಲ್ಲಿ ತನ್ನೇಲ್ಲ ವಿಕೆಟ್ ಕಳೆದುಕೊಂಡು 155 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಬೆಂಗಳೂರು ತಂಡ ಇನ್ನು 17 ಎಸೆತಗಳು ಬಾಕಿ ಇರುವಂತೆಯೇ ಕೇವಲ 1 ವಿಕೆಟ್ ಕಳೆದುಕೊಂಡು ಜಯದ ನಗೆ ಬೀರಿತು.
ಟಾಸ್ ಗೆದ್ದ ಬೆಂಗಳೂರು ತಂಡದ ನಾಯಕ ಮಯಾಂಕ್ ಅಗರ್ವಾಲ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದರು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಗುಲ್ಬರ್ಗಾ ತಂಡಕ್ಕೆ ಆರಂಭಿಕ ಲವ್ನಿತ್ ಸಿಸೋಡಿಯರನ್ನು ಬಿಟ್ಟರೆ ಉಳಿದವರಿಂದ ಯಾವುದೇ ಪರಿಣಾಮಕಾರಿ ಇನ್ನಿಂಗ್ಸ್ ಕಂಡುಬರಲಿಲ್ಲ. ಮತ್ತೊಬ್ಬ ಆರಂಭಿಕನಾಗಿ ಕಣಕ್ಕಿಳಿದಿದ್ದ ನಾಯಕ ದೇವದತ್ ಪಡಿಕ್ಕಲ್ ಕೇವಲ 13 ರನ್ಗಳಿಗೆ ಇನ್ನಿಂಗ್ಸ್ ಮುಗಿಸಿದರು. ಮೊದಲ ವಿಕೆಟ್ಗೆ ಈ ಇಬ್ಬರ ನಡುವೆ 33 ರನ್ಗಳ ಜೊತೆಯಾಟವಿತ್ತು. ಆದರೆ ಈ ಜೋಡಿ ಬೇರ್ಪಟ್ಟ ನಂತರ ಗುಲ್ಬರ್ಗಾ ತಂಡದ ಪೆವಿಲಿಯನ್ ಪರೇಡ್ ಆರಂಭವಾಯಿತು.
ಇನ್ನು ಬೆಂಗಳೂರು ಪರ ಬೌಲಿಂಗ್ನಲ್ಲಿ ಮಿಂಚಿದ ಮೊಹ್ಸಿನ್ ಖಾನ್, ಲವೀಶ್ ಕೌಶಲ್, ಕ್ರಾಂತಿ ಕುಮಾರ್ ಹಾಗೂ ಶುಭಾಂಗ್ ಹೆಗ್ಡೆ ತಲಾ 2 ವಿಕೆಟ್ ಪಡೆದರೆ, ಸಂತೋಖ್ ಸಿಂಗ್ ಕೂಡ 1 ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರು.