newsics.com
ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಸನ್ ಅನುಮತಿ ನೀಡಿದ ರಾಜ್ಯಪಾಲರ ನಡೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಅದರಂತೆ ಇದೀಗ ಕಾಂಗ್ರೆಸ್ ನಾಯಕರು ರಾಜ್ಯಪಾಲ ಟಿ.ಸಿ.ಗೆಹ್ಲೋಟ್ ಗೆ ಮನವಿ ಪತ್ರ ಸಲ್ಲಿಸಿದ್ದು, ಅದರಲ್ಲಿ ರಾಜ್ಯಪಾಲರ ನಡೆಗೆ ಕಟು ಶಬ್ದಗಳಿಂದ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜೊತೆಗೆ ಮನವಿ ಪತ್ರದಲ್ಲಿ 4 ಪ್ರಕರಣಗಳನ್ನು ‘ಕೈ’ ನಾಯಕರು ಉಲ್ಲೇಖಿಸಿದ್ದಾರೆ.
ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ, ಮಾಜಿ ಸಚಿವರಾದ ಮುರುಗೇಶ್ ನಿರಾಣಿ, ಶಶಿಕಲಾ ಜೊಲ್ಲೆ ಹಾಗೂ ಜನಾರ್ದನ ರೆಡ್ಡಿ ಅವರ ವಿರುದ್ಧದ ಪ್ರಕರಣವನ್ನು ಈ ಮನವಿ ಪತ್ರದಲ್ಲಿ ಪ್ರಸ್ತಾಪ ಮಾಡಲಾಗಿದೆ. ‘ಲೋಕಾಯುಕ್ತ ಸಂಸ್ಥೆಯಿಂದ ಪ್ರಾಸಿಕ್ಯೂಷನ್ಗೆ ಮನವಿ ಮಾಡಲಾಗಿದೆ. ಭ್ರಷ್ಟಾಚಾರ ತಡೆ ಕಾಯ್ದೆ ಸೆಕ್ಷನ್ 19ರ ಅಡಿ ನಾಲ್ಕು ಪ್ರಕರಣಗಳನ್ನು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಬೇಕು. ರಾಜ್ಯಪಾಲರ ಕಚೇರಿಯ ರಾಜಕೀಯ ದುರ್ಬಳಕೆ ನಿಂತು, ರಾಜಕೀಯ ಪ್ರೇರಿತ ದೂರುಗಳಿಗೆ ರಾಜಭವನ ಬಳಕೆ ಆಗಬಾರದು. ನಿಮ್ಮ ನಡೆ ಜನರ ವಿಶ್ವಾಸ ಕಳೆದುಕೊಳ್ಳುವಂತಿದ್ದು, ರಾಜಭವನದ ಬಗ್ಗೆ ಜನರು ಅನುಮಾನ ಪಡುವಂತಾಗಿದೆ ಎಂದು ಉಲ್ಲೇಖಿಸಲಾಗಿದೆ.