newsics.com
ಬೆಂಗಳೂರು: ಕೇಂದ್ರ ಸಚಿವ ಎಚ್ಡಿ ಕುಮಾರಸ್ವಾಮಿ, ಬಿಜೆಪಿ ನಾಯಕರಾದ ಮುರುಗೇಶ್ ನಿರಾಣಿ, ಶಶಿಕಲಾ ಜೊಲ್ಲೆ ಹಾಗೂ ಶಾಸಕ ಜನಾರ್ಧನ ರೆಡ್ಡಿ ಅವರ ವಿರುದ್ಧ ವಿಚಾರಣೆಗೆ ಸಂಬಂಧಿಸಿದಂತೆ ಯಾವುದೇ ಕಡತ ರಾಜ್ಯಪಾಲರ ಕಚೇರಿಯಲ್ಲಿ ಬಾಕಿ ಇಲ್ಲ ಎಂಬ ಸಂಗತಿ ಬೆಳಕಿಗೆ ಬಂದಿದೆ.
ಬಿಜೆಪಿ, ಜೆಡಿಎಸ್ ನಾಯಕರ ಮೇಲಿನ ಪ್ರಕರಣಗಳ ಸಂಬಂಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡುವಂತೆ ಒತ್ತಾಯಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆದಿಯಾಗಿ ಸಚಿವರು, ಕಾಂಗ್ರೆಸ್ ನಾಯಕರು ವಿಧಾನಸೌಧದ ಗಾಂಧಿ ಪ್ರತಿಮೆಯಿಂದ ರಾಜಭವನ ಚಲೋ ನಡೆಸಿದರು. ಇದರ ಬೆನ್ನಲ್ಲೇ ರಾಜಭವನವು, ಪ್ರಾಸಿಕ್ಯೂಷನ್ ಕಡತಗಳು ನಮ್ಮ ಕಚೇರಿಯಲ್ಲಿ ಬಾಕಿ ಇಲ್ಲ ಎಂದು ಮಾಹಿತಿ ನೀಡಿದೆ. ಹೀಗಾಗಿ ಇದೀಗ ಕಾಂಗ್ರೆಸ್ ಸುಳ್ಳು ಹೇಳಿತ್ತೇ? ಅಥವಾ ರಾಜ್ಯಭವನವೇ ಸುಳ್ಳು ಮಾಹಿತಿ ನೀಡಿದ್ಯಾ? ಎನ್ನು ಪ್ರಶ್ನೆಗಳು ಉದ್ಭವಿಸಿವೆ
ಸಿದ್ದರಾಮಯ್ಯ ಅವರ ವಿರುದ್ಧ ವಿಚಾರಣೆಗೆ ಅನುಮತಿ ಕೋರಿ ಅರ್ಜಿ ಸಲ್ಲಿಸಿದ್ದ ಟಿ.ಜೆ ಅಬ್ರಾಹಂ ಅವರು, ವಿವಿಧ ಸಕ್ಷಮ ಪ್ರಾಧಿಕಾರಗಳು ವಿಚಾರಣೆಗೆ ಅನುಮತಿ ಕೋರಿರುವ ಪ್ರಸ್ತಾವಣೆಗಳ ಬಾಕಿ ಇರು ಕುರಿತಂತೆ ರಾಜ್ಯಪಾಲರ ಕಚೇರಿಗೆ ಮಾಹಿತಿ ಹಕ್ಕಿನ ಅಡಿಯಲ್ಲಿ ಅರ್ಜಿ ಸಲ್ಲಿಸಿ ಮಾಹಿತಿ ಕೇಳಿದ್ದರು. ಅಬ್ರಾಹಂ ಸಲ್ಲಿಸಿದ್ದ ಈ ಮಾಹಿತಿ ಹಕ್ಕು ಅರ್ಜಿಗೆ ರಾಜ್ಯಭವನ ಕೇವಲ 9 ದಿನಗಳಲ್ಲೇ ಉತ್ತರಿಸಿದ್ದು, ಕೇಂದ್ರ ಸಚಿವ ಕುಮಾರಸ್ವಾಮಿ, ಮಾಜಿ ಸಚಿವರಾದ ಮುರುಗೇಶ್ ನಿರಾಣಿ, ಶಶಿಕಲಾ ಜೊಲ್ಲೆ, ಜನಾರ್ಧನ ರೆಡ್ಡಿ ವಿರುದ್ಧ ವಿಚಾರಣೆಗೆ ಅನುಮತಿ ಕೋರಿರುವ ಯಾವ ಕಡತವೂ ಸಹ ರಾಜ್ಯಪಾಲರ ಕಚೇರಿಯಲ್ಲಿ ಇಲ್ಲ ಎಂದು ಮಾಹಿತಿ ಒದಗಿಸಿದೆ.