ರಾಜ್ಯದ ದೇವಸ್ಥಾನಗಳ ಅಭಿವೃದ್ಧಿಗಾಗಿ ಪ್ರಾಧಿಕಾರ ರಚನೆಗೆ ಕ್ರಮ: ಸಿಎಂ

newsics.com ಮೈಸೂರು: ನಗರದ ಚಾಮುಂಡಿಬೆಟ್ಟದಲ್ಲಿರುವ ಶಕ್ತಿದೇವತೆ ಚಾಮುಂಡಿ ತಾಯಿ ಸನ್ನಿಧಿಯಲ್ಲಿ ಗುಣಮಟ್ಟದ ವ್ಯವಸ್ಥೆ ಕಲ್ಪಿಸದಿದ್ದರೆ ಸಂಬಂಧಪಟ್ಟವರ ಮೇಲೆ ಸೂಕ್ತ ಕ್ರಮ ಕೈಗೊಳ್ಳುವುದು ಖಚಿತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಸಿದರು. ಮಂಗಳವಾರ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ನಡೆದ ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಮೊದಲ ಸಭೆಯನ್ನು ತಾಯಿ ಸನ್ನಿಧಿಯಲ್ಲೇ ನಡೆಸಿ ಪ್ರಾಸ್ತಾವಿಕವಾಗಿ ಮಾತನಾಡಿದರು‌. ಶ್ರೀ ಕ್ಷೇತ್ರ ಹಾಗೂ ದೇವಸ್ಥಾನದ ಸಂಪ್ರದಾಯ ಮತ್ತು ಚರಿತ್ರೆ, ಘನತೆಯನ್ನು ಕಾಪಾಡುವ ಜೊತೆಗೆ ಉನ್ನತೀಕರಿಸಬೇಕು ಎಂದರು. ಪ್ರಾಧಿಕಾರ ವ್ಯವಸ್ಥಿತವಾಗಿ ನಡೆಯಬೇಕು. ಶುಚಿತ್ವಕ್ಕೆ ಅದ್ಯತೆಯಿರಲಿ. … Continue reading ರಾಜ್ಯದ ದೇವಸ್ಥಾನಗಳ ಅಭಿವೃದ್ಧಿಗಾಗಿ ಪ್ರಾಧಿಕಾರ ರಚನೆಗೆ ಕ್ರಮ: ಸಿಎಂ