newsics.
ಬೆಂಗಳೂರು: ಗೌರಿ ಗಣೇಶ ಹಬ್ಬಕ್ಕೆ ಕ್ಷಣಗಣನೆ ಆರಂಭವಾಗಿದೆ. ಶನಿವಾರ ಅಂದರೆ ಸೆ. 7ರಂದು ಕರ್ನಾಟಕದಾದ್ಯಂತ ಗೌರಿ ಗಣೇಶ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗುತ್ತದೆ. ಈಗಾಗಲೇ ಸಾರ್ವಜನಿಕರು ಗಣೇಶೋತ್ಸವ ಆಚರಣೆಗೆ ಸಿದ್ಧತೆ ನಡೆಸಿದ್ದು, ಮೂರ್ತಿ ಪ್ರತಿಷ್ಠಾಪನೆ, ವಿಸರ್ಜನೆ, ಮೆರವಣಿಗೆ ವೇಳೆ ವಿದ್ಯುತ್ ಅವಘಡಗಳ ಬಗ್ಗೆ ಎಚ್ಚರವಹಿಸುವಂತೆ BESCOM ಕೆಲ ಮಾರ್ಗ ಸೂಚನೆಗಳನ್ನು ಬಿಡುಗಡೆ ಮಾಡಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಬೆಸ್ಕಾಂ, ವಿದ್ಯುತ್ ಅವಘಡಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಅಗತ್ಯ ಮಾರ್ಗಸೂಚಿಗಳನ್ನು ಅನುಸರಿಸುವ ಮೂಲಕ ಸುರಕ್ಷತೆಗೆ ಆದ್ಯತೆ ನೀಡಿ. ಜಾಗರೂಕರಾಗಿರಿ, ಯಾವುದೇ ವಿದ್ಯುತ್ ಅವಘಡಗಳಿಗೆ ಕೂಡಲೇ 1912 ಸಹಾಯವಾಣಿಗೆ ಕರೆ ಮಾಡಿ. ಒಟ್ಟಾಗಿ, ನಾವು ಈ ಹಬ್ಬವನ್ನು ಸುರಕ್ಷಿತವಾಗಿ ಮತ್ತು ಸ್ಮರಣೀಯವಾಗಿಸೋಣ ಎಂದು ಬೆಸ್ಕಾಂ ತಿಳಿಸಿದೆ.