newsics.com
ಬೆಂಗಳೂರು: ಮುಡಾ ನಿವೇಶನ ಹಂಚಿಕೆ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬದಲಿಸುವ ನಿರ್ಧಾರಕ್ಕೆ ಕಾಂಗ್ರೆಸ್ನ ಮೇಲೆ ಒತ್ತಡ ಹೆಚ್ಚುತ್ತಿರುವಂತೆಯೇ, ಯಾವುದೇ ವಿವಾದಗಳಿಗೆ ಕಾರಣವಾಗದ ಒಮ್ಮತದ ಅಭ್ಯರ್ಥಿಗಾಗಿ ಪಕ್ಷದ ಹೈಕಮಾಂಡ್ ಹುಡುಕಾಟ ನಡೆಸಿದೆ.
ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಸಿದ್ದರಾಮಯ್ಯ ಅವರ ಸ್ಥಾನಕ್ಕೆ ಫೇವರಿಟ್ ಆಗಿದ್ದರೂ, ಹಿಂದುಳಿದ ಸಮುದಾಯಗಳನ್ನು ಒಗ್ಗೂಡಿಸಲು ಹಿಂದುಳಿದ ವರ್ಗಗಳ ನಾಯಕರನ್ನು ಮುಂದಿನ ಸಿಎಂ ಆಗಿ ಆಯ್ಕೆ ಮಾಡುವ ಸಾಧ್ಯತೆಯನ್ನು ಹೈಕಮಾಂಡ್ ಪರಿಶೀಲಿಸುತ್ತಿದೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಬೆನ್ನಿಗೆ ಪಕ್ಷದ ಒಂದು ವರ್ಗದ ಮುಖಂಡರು ಸಮ್ಮತಿ ಸೂಚಿಸಿದ್ದರೆ, ಮತ್ತೊಂದು ವರ್ಗವು ಪಿಡಬ್ಲ್ಯುಡಿ ಸಚಿವ ಸತೀಶ್ ಜಾರಕಿಹೊಳಿಯವರತ್ತ ಒಲವು ತೋರುತ್ತಿದೆ ಎಂದು ಮೂಲಗಳು ತಿಳಿಸಿವೆ.
ಈ ಬಾರಿ ಅವರಿಗೆ ಅವಕಾಶ ನೀಡಲು ಪಕ್ಷವು ಗಂಭೀರ ಚಿಂತನೆ ನಡೆಸುತ್ತಿದೆ ಎಂಬ ಊಹಾಪೋಹಗಳ ನಡುವೆ ಭಾನುವಾರ, ಸತೀಶ್ ಜಾರಕಿಹೊಳಿ ಕೇಂದ್ರ ನಾಯಕರನ್ನು ಭೇಟಿ ಮಾಡಲು ನವದೆಹಲಿಗೆ ತೆರಳಿದ್ದು ಊಹಾಪೋಹಗಳಿಗೆ ಮತ್ತಷ್ಟು ಪುಷ್ಠಿ ನೀಡುತ್ತಿದೆ.
ಸಿದ್ದರಾಮಯ್ಯನವರ ನಂತರ ಉಳಿದ ವರ್ಗಗಳ ಪ್ರಬಲ ನಾಯಕನಾಗಿ ಅವರ ಜನಪ್ರಿಯತೆ ಹಾಗೂ ಎಸ್ಸಿ ಎಸ್ ಟಿ ಸಮುದಾಯದ 15 ಶಾಸಕರು ಸೇರಿದಂತೆ 30ಕ್ಕೂ ಹೆಚ್ಚು ಶಾಸಕರ ಬೆಂಬಲವು ಸತೀಶ್ ಜಾರಕಿಹೊಳಿಯವರಿಗಿದೆ ಎನ್ನಲಾಗಿದೆ.
ಮುಖ್ಯಮಂತ್ರಿ ರೇಸ್ನಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೂಡ ಇದ್ದು, ವಯಸ್ಸು ಅವರ ಆಸೆಗೆ ಅಡ್ಡಗಾಲಾಗಿದೆ ಎಂದು ಹೇಳಲಾಗುತ್ತಿದೆ.
ರೇಣುಕಾಸ್ವಾಮಿ ಮೇಲೆ ಮತ್ತೆ ಮತ್ತೆ ಹಲ್ಲೆ ನಡೆಸಿದ್ದ ದರ್ಶನ್, ಮಾನವೀಯತೆಯನ್ನೆ ಮರೆತಿದ್ದ ನಟ
ಚಳ್ಳಕೆರೆ ತಹಸೀಲ್ದಾರ್ ಜೀಪ್ಗೆ ಬೆಂಕಿಯಿಟ್ಟ ಯುವಕ: ತಾಯಿಯನ್ನು ನಿಂದಿಸಿದ ಪೊಲೀಸರ ವಿರುದ್ಧ ಕ್ರಮಕ್ಕೆ ಆಗ್ರಹ