newsics.com
ಬೆಂಗಳೂರು:
ಕುಂದಾಪುರ ತಾಲೂಕಿನ ಸರ್ಕಾರಿ ಕಾಲೇಜಿನ ಪ್ರಾಂಶುಪಾಲರಾದ ರಾಮಕೃಷ್ಣ ಬಿಜಿ ಅವರಿಗೆ ಒಲಿದು ಬಂದ ಪ್ರಶಸ್ತಿಯನ್ನ ರಾಜ್ಯ ಸರ್ಕಾರ ತಡೆ ಹಿಡಿದಿದೆ.
ಈ ಹಿಂದೆ ನಡೆದ ಹಿಜಾಬ್ ವಿವಾದದಲ್ಲಿ ರಾಮಕೃಷ್ಣ ಬಿಜಿಯವರು ತಮ್ಮ ಕಾಲೇಜಿನಲ್ಲಿ ಹಿಜಾಬ್ ಹಾಕಿಕೊಂಡು ಬರದಂತೆ ವಿದ್ಯಾರ್ಥಿನಿಗಳಿಗೆ ಕಟ್ಟುನಿಟ್ಟಿನ ಆದೇಶ ನೀಡಿದ್ದರು. ಈ ಕಾರಣಕ್ಕಾಗಿಯೇ ಅವರಿಗೆ ಬಂದ ಪ್ರಶಸ್ತಿಯನ್ನು ತಡೆ ಹಿಡಿಯಲಾಗಿದೆ ಅನ್ನೋ ಮಾತುಗಳು ಬಿಜೆಪಿ ಪಾಳಯದಲ್ಲಿ ಕೇಳಿ ಬರುತ್ತಿದೆ.
ಬಿಜೆಪಿ ಅಧಿಕಾರದ ಅವಧಿಯಲ್ಲಿ ಆಗಿದ್ದ ಹಿಜಾಬ್ ಗಲಾಟೆ ವೇಳೆ, ಹಿಜಾಬ್ ಧರಿಸಿ ಬಂದಿದ್ದ ವಿದ್ಯಾರ್ಥಿಗಳನ್ನು ಕಾಲೇಜಿಗೆ ಪ್ರವೇಶಿಸಲು ಪ್ರಾಂಶುಪಾಲ ರಾಮಕೃಷ್ಠ ಒಪ್ಪಿಗೆ ನೀಡಿರಲಿಲ್ಲ. ಸಮವಸ್ತ್ರದ ಪಾಲನೆ ಕಡ್ಡಾಯಗೊಳಿಸಿದ್ದರು. ಇದೇ ಕಾರಣಕ್ಕೆ ಪ್ರಶಸ್ತಿ ನೀಡಿಲ್ಲ ಎಂಬ ವಾದಗಳು ಸದ್ಯ ಕೇಳಿ ಬರುತ್ತಿವೆ. ಈ ಪ್ರಾಂಶುಪಾಲರಿಗೆ ಪ್ರಶಸ್ತಿ ನೀಡಿದ್ದಕ್ಕೆ ಪ್ರಗತಿಪರ ಚಿಂತಕರು ವಿರೋಧ ಮಾಡಿದ ಕಾರಣ ಸರ್ಕಾರ ಪ್ರಶಸ್ತಿ ಘೋಷಣೆಯನ್ನು ವಾಪಸ್ ಪಡೆದಿದೆ ಎನ್ನಲಾಗುತ್ತಿದೆ.