newsics.com
ನವದೆಹಲಿ: ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಧೋವಲ್ ಸೆಪ್ಟೆಂಬರ್ 10 ರಂದು ಮಾಸ್ಕೋಗೆ ಪ್ರಯಾಣ ಬೆಳೆಸಲಿದ್ದಾರೆ. ಉಕ್ರೇನ್ ರಷ್ಯಾ ನಡುವೆ ನಡೆಯುತ್ತಿರುವ ಭೀಕರ ಯುದ್ಧದ ನಡುವೆ ಅಜಿತ್ ಧೋವಲ್ ರಷ್ಯಾದ ಅಧ್ಯಕ್ಷ ವ್ಲಾಡಮೀರ್ ಪುಟೀನ್ ಅವರನ್ನು ಭೇಟಿಯಾಗುತ್ತಿರುವುದು ಅನೇಕ ಊಹಾಪೋಹಗಳಿಗೆ ಕಾರಣವಾಗಿದೆ. ಇದು ರಷ್ಯಾ, ಉಕ್ರೇನ್ ನಡುವಿನ ಸಂಘರ್ಷವನ್ನು ಕೊನೆಗಾಣಿಸುವ ಶಾಂತಿ ಉಭಯ ದೇಶಗಳ ನಡುವೆ ಶಾಂತಿ ಸ್ಥಾಪನೆಗಾಗಿ ಅಜಿತ್ ಧೋವಲ್ ಹೊರಟಿದ್ದಾರೆ ಎಂಬ ಮಾತುಗಳು ಸದ್ಯ ಅಂತಾರಾಷ್ಟ್ರೀಯ ವಲಯದಲ್ಲಿ ಕೇಳಿ ಬರುತ್ತಿದೆ.
ಈಗಾಗಲೇ ಉಕ್ರೇನ್ ಹಾಗೂ ರಷ್ಯಾ ನಡುವಿನ ಯುದ್ಧವನ್ನು ಕೊನೆಗೊಳಿಸಲು ಭಾರತ ಮಧ್ಯಸ್ಥಿಕೆವಹಿಸಬೇಕು ಎಂಬ ಮಾತುಗಳು ಕೇಳಿ ಬಂದಿದ್ದವು. ಇತ್ತೀಚೆಗಷ್ಟೇ ಪ್ರಧಾನಿ ನರೇಂದ್ರ ಮೊದಿ ಉಕ್ರೇನ್ ಹಾಗೂ ರಷ್ಯಾ ಎರಡು ದೇಶಕ್ಕೆ ಭೇಟಿ ಕೊಟ್ಟು ಬಂದಿದ್ದರು. ಇದರ ಬೆನ್ನಲ್ಲೆ ಈ ಬೆಳವಣಿಗೆ ನಡೆದಿದೆ. ಅಜಿತ್ ಧೋವಲ್ ಜೊತೆ ಬ್ರಿಕ್ಸ್ನ ಮಾಜಿ ಅಧಿಕಾರಿಗಳು ಕೂಡ ಭಾಗವಹಿಸಲಿದ್ದಾರೆ ಅವರೊಂದಿಗೆ ಸಭೆ ನಡೆಸುವ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಧೋವಲ್ ರಷ್ಯಾ ಹಾಗೂ ಚೀನಾದ ಸಮಸ್ಥಾನಿಕರ ಜೊತೆಗೂ ಸಭೆ ನಡೆಸಲಿದ್ದಾರೆ ಎಂಬ ಮಾಹಿತಿ ಬಂದಿದೆ.