newsics.com
ಬೆಂಗಳೂರು, ಸೆಪ್ಟೆಂಬರ್ 08: ಬೆಂಗಳೂರಿನ ರಸ್ತೆ ಗುಂಡಿ ಮುಚ್ಚುವ ಸಂಬಂಧ ಬಿಬಿಎಂಪಿ ಹಿರಿಯ ಅಧಿಕಾರಿಗಳ ಜೊತೆ ಡಿಸಿಎಂ ಡಿಕೆ ಶಿವಕುಮಾರ್ ಇಂದು ಸಭೆ ಮಾಡಿದ್ದಾರೆ.
ಮಲ್ಲೇಶ್ವರದ ವೈಯಾಲಿಕಾವಲ್ ನ ಬಿಬಿಎಂಪಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಬಿಬಿಎಂಪಿ ಮುಖ್ಯ ಕಮಿಷನರ್ ತುಷಾರ್ ಗಿರಿನಾಥ್, ವಿಶೇಷ ಕಮಿಷನರ್ ಮುನಿಶ್ ಮೌದ್ಗೀಲ್, ಬಿಎಂಆರ್ಡಿಎ ಕಮಿಷನರ್, ಡಿಸಿಎಂ ಕಾರ್ಯದರ್ಶಿ ರಾಜೇಂದ್ರ ಚೋಳನ್ ಮತ್ತಿತರರು ಉಪಸ್ಥಿತರಿದ್ಧರು.
ಬೆಂಗಳೂರಿನಲ್ಲಿ ಸೆಪ್ಟೆಂಬರ್ನಲ್ಲಿ ಮಳೆ ಆಗುತ್ತೆ, ಎಚ್ಚರಿಕೆಯಿಂದ ಇರಿ. 15 ದಿನದಲ್ಲಿ ಎಲ್ಲಾ ರಸ್ತೆಗುಂಡಿ ಮುಚ್ಚಬೇಕು, ಇಲ್ಲದಿದ್ದರೆ ಆ್ಯಕ್ಷನ್ ಗ್ಯಾರಂಟಿ ಎಂದು ಬಿಬಿಎಂಪಿ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ. ಯಾವುದೇ ದೂರು ಬರಬಾರದು. ದೂರು ಬಂದರೆ ಅಧಿಕಾರಿಗಳೇ ನೇರ ಹೊಣೆ ಎಂದು ಹೇಳಿದ್ದಾರೆ