newsics.com
ಬೆಂಗಳೂರು : 59ನೇ ಘಟಿಕೋತ್ಸವದಲ್ಲಿ ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್ ಮತ್ತು ಸಮಾಜಸೇವಕ ಕೆ.ಎಸ್ ರಾಜಣ್ಣನವರಿಗೆ ಬೆಂಗಳೂರು ವಿಶ್ವವಿದ್ಯಾಲಯವು ಗೌರವ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ.
ಜ್ಞಾನಜ್ಯೋತಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಇಬ್ಬರೂ ಗಣ್ಯರಿಗೂ ಗೌರವ ಡಾಕ್ಟರೇಟ್ ಪದವಿ ನೀಡಿ ಸನ್ಮಾನಿಸಲಾಯಿತು. ಗೌರವ ಡಾಕ್ಟರೇಟ್ ಸ್ವೀಕರಿಸುವ ಸಂದರ್ಭದಲ್ಲಿ ಗುರುಕಿರಣ್ ಕುಟುಂಸ್ಥರು ಸೇರಿದಂತೆ ಅಶ್ವಿನಿ ಪುನೀತ್ ರಾಜ್ಕುಮಾರ್, ಪ್ರಿಯಾಂಕಾ ಉಪೇಂದ್ರ ಉಪಸ್ಥಿತರಿದ್ದರು
59ನೇ ಘಟಿಕೋತ್ಸವದಲ್ಲಿ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದು, ಸ್ನಾತಕೋತ್ತರ ಪದವಿ ವಿಭಾಗದಲ್ಲಿ ಎಸ್.ಅನ್ನಪೂರ್ಣ 9 ಚಿನ್ನದ ಪದಕ ಮತ್ತು ಸ್ನಾತಕ ಪದವಿ ವಿಭಾಗದಲ್ಲಿ ಅನುರಾಧ 9 ಚಿನ್ನದ ಪದಕ ಸ್ವೀಕರಿಸಿ ಅತಿ ಹೆಚ್ಚು ಚಿನ್ನದ ಪದಕ ಪಡೆದ ಪಟ್ಟಿಗೆ ಸೇರಿದ್ದಾರೆ.
