newsics.com
ಮಂಡ್ಯ: ಮಂಡ್ಯ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದ್ದ ಹೆಣ್ಣುಭ್ರೂಣ ಪತ್ತೆ ಹಾಗೂ ಹತ್ಯೆ ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿವಂತೆ ಮಾಡಿತ್ತು. ಹೆಣ್ಣುಭ್ರೂಣಉ ಹತ್ಯೆಯ (Feticide) ಕರಾಳ ದಂಧೆಯ ಅನೇಕ ಸಂಗತಿಗಳು ಬಗೆದಷ್ಟು ಬಯಲಾಗುತ್ತಲೇ ಇದೆ. ಭ್ರೂಣಲಿಂಗ ಪತ್ತೆ ಹಾಗೂ ಹತ್ಯೆ ಪ್ರಕರಣದಲ್ಲಿ ಮತ್ತೆ ಮೂವರು ಆರೋಪಿಗಳನ್ನು ಮಂಡ್ಯ ಪೊಲೀಸರು ಬಂಧಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ 15 ಜನರನ್ನ ಪೊಲೀಸರು ಅರೆಸ್ಟ್ ಮಾಡಿದ್ದು ಇದೀಗ ಮತ್ತೆ ಮೂವರು ಬಲೆಗೆ ಬಿದ್ದಿದ್ದಾರೆ. ಈ ಮೂಲಕ ಬಂಧಿತರ ಸಂಖ್ಯೆ 18ಕ್ಕೆ ಏರಿಕೆಯಾಗಿದೆ. ಈ ಪ್ರಕರಣದಲ್ಲಿ ಇನ್ನು ಹಲವು ಆರೋಪಿಗಳು ಭಾಗಿಯಾಗಿರುವ ಬಗ್ಗೆ ಶಂಕೆ ವ್ಯಕ್ತಪಡಿಸಲಾಗಿತ್ತು. ತನಿಖೆ ಮುಂದುವರೆಸಿದ್ದ ಪೊಲೀಸರು ಈಗ ಮತ್ತೆ ಮೂವರನ್ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪೊಲೀಸರಿಗೆ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ಆರೋಪಿಗಳನ್ನು ಪತ್ತೆ ಮಾಡಿ ಬಂಧಿಸಲಾಗಿದೆ. ಬಂಧಿತರಿಂದ ಒಂದು ಕಾರು ವಶಕ್ಕೆ ಪಡೆಯಲಾಗಿದೆ.
ಪಾಂಡವಪುರ ತಾಲೂಕಿನ ಹಿರೇಮರಳಿ ಗ್ರಾಮದ ನವೀನ್, ಹರಳಹಳ್ಳಿಯ ಜಬ್ಬರ್@ಬಾಬು, ಕೆ.ಆರ್.ನಗರದ ಶಂಕರ ಬಂಧಿತ ಆರೋಪಿಗಳು. ಮೇಲುಕೋಟೆ, ಪಾಂಡವಪುರ, ಬೆಳ್ಳೂರು ಠಾಣೆಗಳಲ್ಲಿ ಪ್ರಕರಣ ದಾಖಲಾಗಿದ್ದು ಮಂಡ್ಯ ಪೊಲೀಸರು ಮತ್ತಷ್ಟು ತನಿಖೆ ಮುಂದುವರಿಸಿದ್ದಾರೆ.