newsics.com
ದೇವರಪಲ್ಲಿ: ಲಾರಿ ಪಲ್ಟಿಯಾಗಿ ಸ್ಥಳದಲ್ಲೇ 7 ಕೂಲಿ ಕಾರ್ಮಿಕರು ಮೃತಪಟ್ಟಿರುವ ಘಟನೆ ಪೂರ್ವ ಗೋದಾವರಿ ಜಿಲ್ಲೆಯ ದೇವರಪಲ್ಲಿ ತಾಲೂಕಿನ ಚಿಲಕವಾರಿಪಾಕಲ ಬಳಿ ನಡೆದಿದೆ.
ಮೃತರ ಪೈಕಿ 6 ಕಾರ್ಮಿಕರು ತಾಡಿಮಳ್ಳ ಗ್ರಾಮದ ನಿವಾಸಿಗಳು. ಘಟನೆಯಲ್ಲಿ ಹಲವರಿಗೆ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಗೋಡಂಬಿ ಲೋಡ್ ತುಂಬಿಕೊಂಡು ತೆರಳುತ್ತಿದ್ದ ಲಾರಿ, ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ದುರಂತ ಸಂಭವಿಸಿದೆ.
ದೇವರಪಲ್ಲಿ ಪೊಲೀಸರು ಸ್ಥಳೀಯರ ನೆರವಿನಿಂದ ಮೃತದೇಹಗಳನ್ನು ಹೊರತೆಗೆದಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಕೊವ್ವೂರು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಮೃತರೆಲ್ಲರೂ ನೀಡದವೋಲು ಮಂಡಲದ ತಾಡಿಮಲ್ಲ ಗ್ರಾಮದವರು. ತಮ್ಮಿ ರೆಡ್ಡಿ ಸತ್ಯನಾರಾಯಣ (45), ದೇಶಭಟ್ಟುಲ ವೆಂಕಟರಾವ್ (40), ಬೊಕ್ಕ ಪ್ರಸಾದ್ (32), ಪೆನುಗುರ್ತಿ ಚಿನ್ನ ಮುಸಲಯ್ಯ (35), ಕತ್ತಿವ ಕೃಷ್ಣ (40), ಕತ್ತಿವ ಸತ್ತಿಪಂಡು (40), ತಾಡಿ ಕೃಷ್ಣ (45) ಮೃತ ದುರ್ದೈವಿಗಳು ಎಂದು ತಿಳಿದು ಬಂದಿದೆ.