newsics.com
ಕೊಲೆ ಆರೋಪಿಯಾಗಿ ಬಳ್ಳಾರಿ ಜೈಲು ಸೇರಿದ ದರ್ಶನ್ ಅವರನ್ನು ಇಂದು (ಸೆಪ್ಟೆಂಬರ್ 12) ಕುಟುಂಬದವರು ಭೇಟಿ ಮಾಡಿದ್ದಾರೆ. ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಚಾರ್ಜ್ ಶಾಟ್ ಸಲ್ಲಿಕೆ ಆದ ಬಳಿಕ ಇದೇ ಮೊದಲ ಬಾರಿಗೆ ದರ್ಶನ್ ಅವರನ್ನು ಪತ್ನಿ ವಿಜಯಲಕ್ಷ್ಮಿ ಮತ್ತು ತಮ್ಮ ದಿನಕರ್ ಭೇಟಿ ಮಾಡಿದ್ದಾರೆ.
ಜೈಲು ಸಂದರ್ಶಕರ ಕೊಠಡಿಯಲ್ಲಿ 25 ನಿಮಿಷಗಳ ಕಾಲ ಮಾತನಾಡಿದ್ದಾರೆ. ಕೊಲೆ ಕೇಸ್ ನಲ್ಲಿ ದರ್ಶನ್ ಎ2 ಆಗಿದ್ದು, ಅವರ ವಿರುದ್ಧ ಅನೇಕ ಸಾಕ್ಷಿಗಳು ಇವೆ ಎಂಬುದು ಚಾರ್ಜ್ ಶೀಟ್ ನಲ್ಲಿ ಉಲ್ಲೇಖ ಆಗಿದೆ.