newsics.com
ಬೆಂಗಳೂರು; ಜೀವ ಬೆದರಿಕೆ, ಜಾತಿ ನಿಂದನೆ ಆರೋಪದಲ್ಲಿ ಬಂಧಿತವಾಗಿರುವ ಶಾಸಕ ಮುನಿರತ್ನ ಅವರನ್ನು ನ್ಯಾಯಾಧೀಶರು ಎರಡು ದಿನ ಪೊಲೀಸ್ ಕಸ್ಟಡಿಗೆ ನೀಡಿದ್ದಾರೆ.
ಶನಿವಾರ ಪೊಲೀಸರು ಮುನಿರತ್ನ ಅವರನ್ನು ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ನಂಗಲಿ ಗ್ರಾಮದ ಬಳಿ ಬಂಧಿಸಿ ಕರೆತಂದರು. ರಾತ್ರಿ ಆರೋಗ್ಯ ತಪಾಸಣೆ ನಡೆಸಿ, ಬಳಿಕ ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದರು.
ಪೊಲೀಸರು ಒಂದು ವಾರ ಕಸ್ಟಡಿಗೆ ನೀಡುವಂತೆ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರಿಗೆ ಮನವಿ ಮಾಡಿದರು. ವಿಚಾರಣೆ ನಡೆಸಿದ ಟಠನ್ಯಾಯಾದೀಶರು ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದರು.