newsics.com
ಕೊಪ್ಪಳ: ಪ್ರಚೋದನಕಾರಿ ಬಾಷಣ ಮಾಡಿದ್ದ ಎಸ್ಡಿಪಿಐ ಜಿಲ್ಲಾ ಕಾರ್ಯದರ್ಶಿ ಇಮ್ರಾನ್ ಸೇರಿದಂತೆ ಮೂವರ ವಿರುದ್ಧ ಕಾರಟಗಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಕೇಂದ್ರ ಸರ್ಕಾರ ಜಾರಿಗೆ ತರಲು ನಿರ್ಧರಿಸಿರುವ ವಕ್ಫ್ ಬಿಲ್-2024 ತಿದ್ದುಪಡಿ ಮಸೂದೆಯನ್ನು ವಿರೋಧಿಸಿ ಸೆಪ್ಟೆಂಬರ್ 13ರಂದು ಕಾರಟಗಿ ಪಟ್ಟಣದಲ್ಲಿ ಮುಸ್ಲಿಮರು ಪ್ರತಿಭಟನೆ ನಡೆಸಿದ್ದರು.
ಈ ಪ್ರತಿಭಟನೆಯಲ್ಲಿ ಭಾಷಣ ಮಾಡಿದ್ದ ಎಸ್ಡಿಪಿಐ ಜಿಲ್ಲಾ ಕಾರ್ಯದರ್ಶಿ ಇಮ್ರಾನ್ ಎಂಬಾತ, ವಕ್ಫ್ ತಂಟೆಗೆ ಬಂದರೆ ನಿಮ್ಮನ್ನು ಮುಸ್ಲಿಂ ಸಮಾಜ ಮುಗಿಸುತ್ತೆ. ನೀವು ಯಾವ ಸಂತತಿಯಿಂದ ಬಂದಿದ್ದಿರೋ, ಯಾವ ದೇಶದಿಂದ ಬಂದಿದ್ದೀರೋ ಗೊತ್ತಿಲ್ಲ. ಆದರೆ, ನಿಮ್ಮ ಸಂತತಿಯನ್ನು ಮುಗಿಸಲಿಕ್ಕೆ ಮುಸ್ಲಿಂ ಸಮಾಜ ಇರುವುದು ಎನ್ನುವ ಸಂದೇಶ ಬಿಜೆಪಿಯವರಿಗೆ ನೀಡುತ್ತೇವೆ ಎಂದು ಪ್ರಚೋದನಕಾರಿ ಹೇಳಿಕೆ ನೀಡಿದ್ದರು.