newsics.com
ನವದೆಹಲಿ: ತನ್ನ ಅನುಮತಿಯಿಲ್ಲದೆ ದೇಶದಲ್ಲಿ ಯಾವುದೇ ನೆಲಸಮ ಕಾರ್ಯ ನಡೆಯಬಾರದು ಎಂದು ಸುಪ್ರೀಂ ಕೋರ್ಟ್ ಇಂದು ಮಹತ್ವದ ತೀರ್ಪು ನೀಡಿದೆ.
“ಬುಲ್ಡೋಜರ್ ನ್ಯಾಯ”ವನ್ನು ಸ್ಥಗಿತಗೊಳಿಸಿದ ನ್ಯಾಯಾಲಯ ಒಂದು ವೇಳೆ ಅಕ್ರಮ ಧ್ವಂಸ ಪ್ರಕರಣವಿದ್ದರೂ ಅದು ಸಂವಿಧಾನದ ನೀತಿಗೆ ವಿರುದ್ಧವಾಗಿದೆ ಎಂದು ಹೇಳಿದೆ.
ದೇಶಾದ್ಯಂತ ಒಂದೇ ಒಂದು ಕಟ್ಟಡ ಧ್ವಂಸ ಮಾಡಿದರೂ ಸಂವಿಧಾನದ ಆಶಯಕ್ಕೆ ಧಕ್ಕೆ ಉಂಟಾಗುತ್ತದೆ. ನಮ್ಮ ಸಂವಿಧಾನದ ಮೂಲ ಆಶಯಕ್ಕೆ ವಿರುದ್ಧವಾದದ್ದು ನಡೆಯುತ್ತದೆ ಎಂದು ಬುಲ್ಡೋಜರ್ ಕಾರ್ಯಾಚರಣೆ ಬಗ್ಗೆ ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿದೆ. ಈ ಆದೇಶ ಸಾರ್ವಜನಿಕ ರಸ್ತೆಗಳು, ಫುಟ್ಪಾತ್ ಒತ್ತುವರಿಗೆ ಅನ್ವಯಿಸುವುದಿಲ್ಲ. ಸರ್ಕಾರಿ ಭೂಮಿ ಒತ್ತುವರಿ ಆಗಿದ್ದರೆ ತೆರವು ಮಾಡಲು ಅವಕಾಶ ನೀಡಲಾಗುವುದು/ ನಿಯಮದಂತೆ ಅನುಮತಿ ಪಡೆದು ಒತ್ತುವರಿ ತೆರವಿಗೆ ಅವಕಾಶ ನೀಡಲಾಗುವುದು ಎಂದು ಸುಪ್ರೀಂ ಕೋರ್ಟ್ ಹೇಳಿದೆ.