newsics.com
ಬೆಂಗಳೂರು: ರಾಷ್ಟ್ರ ಪ್ರಶಸ್ತಿ ವಿಜೇತ ಚಲನಚಿತ್ರ ನಿರ್ಮಾಪಕ, ನಿರ್ದೇಶಕ ಕೋಡಳ್ಳಿ ಶಿವರಾಮ್ ಮಂಗಳವಾರ ರಾತ್ರಿ ನಿಧನರಾದರು.
ಕನ್ನಡ ಚಿತ್ರರಂಗದಲ್ಲಿ ತಮ್ಮದೇ ಛಾಪು ಮೂಡಿಸಿದ್ದ ಅವರು ವಯೋಸಹಜ ಅನಾರೋಗ್ಯದಿಙದ ಕೊನೆಯುಸಿರೆಳೆದರು.
ಮಂಗಳವಾರ ರಾತ್ರಿ ರಾಷ್ಟ್ರಪ್ರಶಸ್ತಿ, ರಾಜ್ಯಪ್ರಶಸ್ತಿ ವಿಜೇತ ಕನ್ನಡದ ಚಲನಚಿತ್ರ ನಿರ್ದೇಶಕ, ನಿರ್ಮಾಪಕ ಕೋಡಳ್ಳಿ ಶಿವರಾಮ್ ಅವರು ವಿಧಿವಶರಾಗಿದ್ದಾರೆ. ಅವರ ಅಂತ್ಯಕ್ರಿಯೆ ಬುಧವಾರ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಕೋಡಳ್ಳಿ ಶಿವರಾಮ್ ಅವರು ಗ್ರಹಣ, ಬೆಳ್ಳಿ ಬೆಳಕು ಸೇರಿದಂತೆ ಹಲವು ಚಿತ್ರಗಳನ್ನು ನಿರ್ಮಿಸಿ, ನಿರ್ದೇಶಿಸಿದ್ದರು.