newsics.comಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪಿಯುಸಿ ಬಳಿಕ ಈಗ ಎಸ್ಎಸ್ಎಲ್ ಸಿ ಪರೀಕ್ಷೆಗೂ ಸಮಯ ಕಡಿತದ ಬಗ್ಗೆ ಚಿಂತನೆ ನಡೆಸಿದೆ.ಕನ್ನಡ ಪರೀಕ್ಷೆ ಹೊರತು ಪಡಿಸಿ ಉಳಿದ ಎಲ್ಲ ಲಿಖಿತ ಪರೀಕ್ಷೆಗಳ ಅವಧಿಯನ್ನ ಕಡಿತಕ್ಕೆ ಚಿಂತನೆ ನಡೆಸಿದೆ. ಈಗಾಗಲೇ ಪಿಯು ಪರೀಕ್ಷೆಯಲ್ಲಿ ಮತ್ತೊಂದು ಪ್ರಯೋಗ ಮಾಡಿರುವ ಶಿಕ್ಷಣ ಇಲಾಖೆ ದ್ವಿತೀಯ ಪಿಯು ಪರೀಕ್ಷೆ ಅವಧಿ ಇಳಿಕೆಗೆ ಮುಂದಾಗಿದೆ.ದ್ವಿತೀಯ ಪಿಯುಸಿ ಪರೀಕ್ಷೆಯ ಅವಧಿಯನ್ನು 15 ನಿಮಿಷಗಳ ಕಾಲ ಇಳಿಕೆ ಮಾಡಿದೆ. 3 ಗಂಟೆಗಳ ಕಾಲ ಬರೆಯಬೇಕಿದ್ದ ಪರೀಕ್ಷೆ ಇದೇ ಶೈಕ್ಷಣಿಕ ವರ್ಷದಿಂದ 2 ಗಂಟೆ 45 ನಿಮಿಷಕ್ಕೆ ನಿಗಧಿ ಮಾಡಿದೆ.ಸರ್ಕಾರದ ಮುಂದೆ ಇಟ್ಟು ಲಿಖಿತ ಪರೀಕ್ಷೆಯ ಅವಧಿಯಲ್ಲಿ 15 ನಿಮಿಷಗಳ ಕಾಲದ ಸಮಯ ಕಡಿತ ಮಾಡಲು ಶಾಲಾ ಶಿಕ್ಷಣ ಇಲಾಖೆ ಮುಂದಾಗಿದೆ.ಲಿಖಿತ ಬರವಣಿಗೆಗೆ ಮಾತ್ರ 2 ಗಂಟೆ 45 ನಿಮಿಷಗಳ ಕಾಲಾವಕಾಶ ನೀಡಲು ಚಿಂತನೆ ನಡೆದಿದೆ. ಸದ್ಯ ಇದಕ್ಕೆ ವಿರೋಧ ಶುರುವಾಗಿದೆ. ಈಗಾಗಲೇ ಪಿಯು ಪರೀಕ್ಷೆ ಅವಧಿ ಕಡಿಮೆ ಮಾಡಲಾಗಿದೆ. ಅದೇ ರೀತಿ ಎಸ್ಎಸ್ಎಲ್ ಸಿ ಅವಧಿಯೂ ಕಡಿತ ಮಾಡವುದು ವಿದ್ಯಾರ್ಥಿಗಳ ಶೈಕ್ಷಣಿಕ ದೃಷ್ಟಿಯಿಂದ ಉತ್ತಮ ಬೆಳವಣಿಗೆಯಲ್ಲ. ಜೊತೆಗೆ ಇದೇ 24 ರಿಂದ ಶುರುವಾಗುತ್ತಿರುವ ಮದ್ಯವಾರ್ಷಿಕ ಪರೀಕ್ಷೆಗೂ ಮಂಡಳಿ ಪ್ರಶ್ನೆ ಪತ್ರಿಕೆ ನೀಡುತ್ತಿರವುದು ವೆಬ್ ಕಾಸ್ಟಿಂಗ್ ಮಾಡ್ತೀರೊದು ಖಾಸಗಿ ಶಾಲೆಗಳ ಒಕ್ಕೂಟದ ವಿರೋಧಕ್ಕೆ ಕಾರಣವಾಗಿದೆ.