newsics.com
ನವದೆಹಲಿ: ಬೆಂಗಳೂರಿನ ಗೋರಿಪಾಳ್ಯವನ್ನು ‘ಪಾಕಿಸ್ತಾನ’ ಎಂದು ಕರೆದ ಹಾಗೂ ಮಹಿಳೆ ಬಗ್ಗೆ ಲಘುವಾಗಿ ಮಾತಾಡಿದ ಕರ್ನಾಟಕ ಹೈಕೋರ್ಟ್ ನ್ಯಾಯಾಧೀಶರನ್ನು ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದುಕೊಂಡಿದೆ.
ನ್ಯಾಯಮೂರ್ತಿ ವೇದವ್ಯಾಸಾಚಾರ್ ಶ್ರೀಶಾನಂದ ಅವರು ಇತ್ತೀಚೆಗೆ ನ್ಯಾಯಾಲಯದ ವಿಚಾರಣೆ ವೇಳೆ ನೀಡಿದ ವಿವಾದಾತ್ಮಕ ಹೇಳಿಕೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಶುಕ್ರವಾರ ಕರ್ನಾಟಕ ಹೈಕೋರ್ಟ್ನಿಂದ ವರದಿ ಕೇಳಿದೆ.
ಜಮೀನ್ದಾರ-ಬಾಡಿಗೆದಾರ ವಿವಾದದ ವಿಚಾರಣೆ ವೇಳೆ ನ್ಯಾಯಮೂರ್ತಿ ಶ್ರೀಶಾನಂದ, ಬೆಂಗಳೂರಿನಲ್ಲಿ ಮುಸ್ಲಿಂ ಬಹುಸಂಖ್ಯಾತ ಪ್ರದೇಶವಾದ ಗೋರಿಪಾಳ್ಯವನ್ನು ‘ಪಾಕಿಸ್ತಾನ’ ಎಂದು ಉಲ್ಲೇಖಿಸಿದ್ದರು. ಅಲ್ಲದೆ ಮಹಿಳಾ ವಕೀಲರನ್ನು ಒಳಗೊಂಡ ಸ್ತ್ರೀ ವಿರೋಧಿ ಕಮೆಂಟ್ ಮಾಡಿದ್ದರು.
ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ನ್ಯಾಯಮೂರ್ತಿಗಳಾದ ಎಸ್.ಖನ್ನಾ, ಬಿ.ಆರ್.ಗವಾಯಿ, ಎಸ್.ಕಾಂತ್ ಮತ್ತು ಎಚ್.ರಾಯ್ ಅವರನ್ನೊಳಗೊಂಡ ಐದು ನ್ಯಾಯಾಧೀಶರ ಪೀಠವು ಸಾಂವಿಧಾನಿಕ ನ್ಯಾಯಾಲಯದ ನ್ಯಾಯಾಧೀಶರು ನ್ಯಾಯಾಲಯದಲ್ಲಿ ತಮ್ಮ ಹೇಳಿಕೆಗಳಿಗೆ ಸಂಬಂಧಿಸಿದಂತೆ ಸ್ಪಷ್ಟ ಮಾರ್ಗಸೂಚಿಗಳನ್ನು ಸ್ಥಾಪಿಸುವ ಅಗತ್ಯವನ್ನು ವ್ಯಕ್ತಪಡಿಸಿತು.
ನ್ಯಾಯಾಲಯದ ಕಲಾಪಗಳ ಮೇಲ್ವಿಚಾರಣೆ ಮತ್ತು ವರ್ಧಿಸುವಲ್ಲಿ ಸಾಮಾಜಿಕ ಮಾಧ್ಯಮಗಳು ಸಕ್ರಿಯ ಪಾತ್ರ ವಹಿಸಿದಾಗ, ನ್ಯಾಯಾಂಗ ವ್ಯಾಖ್ಯಾನವು ನ್ಯಾಯಾಲಯಗಳಿಂದ ನಿರೀಕ್ಷಿಸುವ ಶಿಷ್ಟಾಚಾರಕ್ಕೆ ಹೊಂದಿಕೆಯಾಗುತ್ತದೆ ಎಂದು ಖಚಿತಪಡಿಸಿಕೊಳ್ಳುವ ತುರ್ತು ಅಗತ್ಯ ಇದೆ ಎಂದು ಸುಪ್ರೀಂ ಕೋರ್ಟ್ ನ್ಯಾಯಪೀಠ ಹೇಳಿದೆ.
https://twitter.com/i/status/1836435403366371804
ಮಾವ ನನ್ನನ್ನು ಅಸಭ್ಯವಾಗಿ ಮುಟ್ಟಿದ! ಸೊಸೆಯ ದೂರಿನ ಮೇರೆಗೆ ಪ್ರಧಾನ ಅರ್ಚಕ ಅಮಾನತು