ಮಹಿಳೆ ಬಗ್ಗೆ ಲಘುವಾಗಿ ಮಾತಾಡಿದ ಹೈಕೋರ್ಟ್ ಜಡ್ಜ್‌ಗೆ ಸುಪ್ರೀಂ ತರಾಟೆ, ವರದಿಗೆ ಸೂಚನೆ

newsics.com ನವದೆಹಲಿ: ಬೆಂಗಳೂರಿನ ಗೋರಿಪಾಳ್ಯವನ್ನು ‘ಪಾಕಿಸ್ತಾನ’ ಎಂದು ಕರೆದ ಹಾಗೂ ಮಹಿಳೆ ಬಗ್ಗೆ ಲಘುವಾಗಿ ಮಾತಾಡಿದ ಕರ್ನಾಟಕ ಹೈಕೋರ್ಟ್ ನ್ಯಾಯಾಧೀಶರನ್ನು ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ನ್ಯಾಯಮೂರ್ತಿ ವೇದವ್ಯಾಸಾಚಾರ್ ಶ್ರೀಶಾನಂದ ಅವರು ಇತ್ತೀಚೆಗೆ ನ್ಯಾಯಾಲಯದ ವಿಚಾರಣೆ ವೇಳೆ ನೀಡಿದ ವಿವಾದಾತ್ಮಕ ಹೇಳಿಕೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಶುಕ್ರವಾರ ಕರ್ನಾಟಕ ಹೈಕೋರ್ಟ್‌ನಿಂದ ವರದಿ ಕೇಳಿದೆ. ಜಮೀನ್ದಾರ-ಬಾಡಿಗೆದಾರ ವಿವಾದದ ವಿಚಾರಣೆ ವೇಳೆ ನ್ಯಾಯಮೂರ್ತಿ ಶ್ರೀಶಾನಂದ, ಬೆಂಗಳೂರಿನಲ್ಲಿ ಮುಸ್ಲಿಂ ಬಹುಸಂಖ್ಯಾತ ಪ್ರದೇಶವಾದ ಗೋರಿಪಾಳ್ಯವನ್ನು ‘ಪಾಕಿಸ್ತಾನ’ ಎಂದು ಉಲ್ಲೇಖಿಸಿದ್ದರು. ಅಲ್ಲದೆ ಮಹಿಳಾ ವಕೀಲರನ್ನು … Continue reading ಮಹಿಳೆ ಬಗ್ಗೆ ಲಘುವಾಗಿ ಮಾತಾಡಿದ ಹೈಕೋರ್ಟ್ ಜಡ್ಜ್‌ಗೆ ಸುಪ್ರೀಂ ತರಾಟೆ, ವರದಿಗೆ ಸೂಚನೆ