newsics.com
ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ, ನಟ ದರ್ಶನ್ ಕೊನೆಗೂ ಪ್ರಕರಣದಲ್ಲಿ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ. ಹೌದು, ದರ್ಶನ್ ಬಂಧನವಾಗಿ 102 ದಿನಗಳು ಕಳೆದಿವೆ. ಚಾರ್ಜ್ ಶೀಟ್ ಸಲ್ಲಿಕೆಯಾಗಿ ಎರಡು ವಾರಗಳು ಆಗಿದ್ದರೂ, ದರ್ಶನ್ ಜಾಮೀನಿಗಾಗಿ ಅರ್ಜಿ ಸಲ್ಲಿಸಿರಲಿಲ್ಲ. ಇಂದು ಅರ್ಜಿ ಸಲ್ಲಿಕೆಯಾಗಿದೆ.
ಪ್ರಕರಣದ ಆರೋಪ ಪಟ್ಟಿ ಸಲ್ಲಿಕೆಯಾಗಿ ಎರಡು ವಾರಕ್ಕೂ ಹೆಚ್ಚು ಸಮಯವಾಗಿದ್ದು, ತುಸು ಹೆಚ್ಚೇ ಸಮಯ ತೆಗೆದುಕೊಂಡು ದರ್ಶನ್, ತಮ್ಮ ವಕೀಲರ ಕಡೆಯಿಂದ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ. ಸೆಷನ್ ಕೋರ್ಟಿಗೆ ಅರ್ಜಿ ಸಲ್ಲಿಸಲಾಗಿತ್ತು. ತುರ್ತು ವಿಚಾರಣೆಗಾಗಿ ಇಂದೇ ಮನವಿ ಮಾಡಿಕೊಳ್ಳಲಾಗಿತ್ತು. ದರ್ಶನ್ ಪರ ಸುನಿಲ್ ಕೋರ್ಟಿಗೆ ಹಾಜರಾಗಿದ್ದರು. ಎಸ್.ಪಿಪಿಗೆ ನೋಟಿಸ್ ಜಾರಿ ಮಾಡಿ ಇದೇ ಸೋಮವಾರಕ್ಕೆ ಅರ್ಜಿ ವಿಚಾರಣೆಯನ್ನು ಮುಂದೂಡಲಾಯಿತು.
ಇದರ ನಡುವೆ, ದರ್ಶನ್ ಗೆ ಕೊಲ್ಲುವ ಉದ್ದೇಶ ಇರಲಿಲ್ಲ, ಅಚಾನಕ್ಕಾಗಿ ಘಟನೆ ನಡೆದಿದೆ ಅಲ್ಲದೆ ರೇಣುಕಾ ಸ್ವಾಮಿ ಸತ್ತಾಗ ದರ್ಶನ್ ಸ್ಥಳದಲ್ಲಿರಲಿಲ್ಲ ಎಂಬ ಮಾತುಗಳು ಸಹ ಕೇಳಿ ಬರುತ್ತಿದ್ದು, ಇದೇ ಆಧಾರದ ಮೇಲೆ ಜಾಮೀನು ಅರ್ಜಿಗೆ ವಕೀಲರು ವಾದಿಸುವ ಸಾಧ್ಯತೆ ಇದೆ.