newsics.com
ಬೆಂಗಳೂರು: ವಿಧಾನಸೌಧದ ಪಶ್ಚಿಮ ದ್ವಾರದಲ್ಲಿ ನಾಡದೇವಿ ಭುವನೇಶ್ವರಿ ಪ್ರತಿಮೆ ಪ್ರತಿಷ್ಠಾಪನೆಗೆ ಸರ್ಕಾರ ಮುಂದಾಗಿದೆ.
ಕರ್ನಾಟಕ ಸುವರ್ಣ ಸಂಭ್ರಮದ ಸಮಾರೋಪ ಸಮಾರಂಭದ ದಿನವಾದ ನವೆಂಬರ್ 1ರಂದು ಪ್ರತಿಮೆ ಅನಾವರಣಗೊಳ್ಳಲಿದೆ.
25 ಅಡಿ ಎತ್ತರದ ಕಂಚಿನ ಪ್ರತಿಮೆಯು ಬೆಂಗಳೂರಿನ ಹೊರವಲಯದ ಕೈಗಾರಿಕಾ ಪ್ರದೇಶದಲ್ಲಿ ಸಿದ್ಧಗೊಳ್ಳುತ್ತಿದೆ. ಸಿಮೆಂಟಿನಲ್ಲಿ ಪ್ರತಿಮೆ ನಿರ್ಮಿಸಿ ನಂತರ ಫೈಬರ್ ಗ್ಲಾಸ್ನಲ್ಲಿ ಅಚ್ಚು ತೆಗೆದು ಕಂಚಿನಲ್ಲಿ ಎರಕ ಹಾಕಲಾಗುತ್ತದೆ. ಈಗಾಗಲೇ ಸಿಮೆಂಟ್ನಲ್ಲಿ ಪ್ರತಿಮೆ ನಿರ್ಮಿಸಲಾಗಿದೆ.
ನಾಡದೇವಿ ಪ್ರತಿಮೆಯ ಹಿಂದೆ ಕರ್ನಾಟಕ ನಕ್ಷೆ ಹಾಗೂ ಉಬ್ಬು ಶಿಲ್ಪ ಇರಲಿದೆ. ಮುಂಭಾಗದಲ್ಲಿ ಭೌಗೋಳಿಕ ನಕ್ಷೆ ಇದ್ದರೆ ಹಿಂಬದಿಯಲ್ಲಿ ನಾಡಗೀತೆಯನ್ನು ಕೆತ್ತಲಾಗಿದೆ. ಕರ್ನಾಟಕದ ಪ್ರಸಿದ್ಧ ಶಿಲ್ಪಕಲಾ ಶೈಲಿಗಳಾದ ಹೊಯ್ಸಳ, ಚಾಲುಕ್ಯ, ಕದಂಬ ಹಾಗೂ ಆಧುನಿಕ ನೈಜ ಶಿಲ್ಪಗಳ ಶೈಲಿಗಳನ್ನು ಅಳವಡಿಸಿ ಪ್ರತಿಮೆಯನ್ನು ನಿರ್ಮಿಸಲಾಗುತ್ತದೆ. ಇದರಲ್ಲಿ ರಾಜಲಾಂಛನಗಳಾದ ಹೊಯ್ಸಳ ಲಾಂಛನ, ವೈಜಯಂತಿ ಮಾಲೆ ಕಂಠೀಹಾರ, ಗಂಡ ಭೇರುಂಡ ಇರಲಿವೆ.
ಮೈಸೂರು ಅರಮನೆ ಆವರಣ ದಾಟಿ ರಸ್ತೆಯಲ್ಲಿ ಅಡ್ಡಾದಿಡ್ಡಿ ಓಡಿದ ದಸರಾ ಆನೆ ಕಂಜನ್, ಜನ ಕಂಗಾಲು
ಕಿರಿಯ ಗೆಳೆಯನೊಂದಿಗೆ ಓಯೋ ರೂಮ್ಗೆ ಹೋದ ಈ ಆಂಟಿಗೇನಾಯ್ತು? ಲವ್ ಮೂಡ್ನಲ್ಲಿದ್ದಾಗಲೇ ಸತ್ತಿದ್ದು ಹೇಗೆ?
ಕಚೇರಿಯ ಕಾಫಿ, ಟೀ ಬ್ರೇಕ್ನಲ್ಲೂ ಲೈಂಗಿಕ ಸಂಪರ್ಕ ಹೊಂದಲು ಹೇಳಿದ್ದೇಕೆ?
ನಾಡೋಜ ಡಾ.ಹಂಪನಾ ಈ ಬಾರಿಯ ದಸರಾ ಉದ್ಘಾಟಕರು: ಸಿಎಂ ಘೋಷಣೆಗೆ ಹಿರಿಯ ಸಾಹಿತಿ ಸಂತಸ