newsics.com
ಬೆಂಗಳೂರು: ಬಿಬಿಎಂಪಿ ಮೈದಾನದ ಗೇಟ್ ಬಿದ್ದು 7 ವರ್ಷದ ಮಗು ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ನಿರಂಜನ್ ಮೃತ ಬಾಲಕ ದುರ್ದೈವಿ ಎಂದು ತಿಳಿದು ಬಂದಿದೆ. ವಿಜಯಕುಮಾರ್ – ಪ್ರಿಯಾ ದಂಪತಿಯ ಮಗುವಾದ ನಿರಂಜನ್, ಆಟ ಆಡಲು ಮೈದಾನದ ಗೇಟ್ ಓಪನ್ ಮಾಡುತ್ತಿದ್ದಂತೆ ಮಗುವಿನ ಮೇಲೆಯೇ ಗೇಟ್ ಬಿದ್ದಿದೆ. ಈ ವೇಳೆ ತಲೆಗೆ ತೀವ್ರ ಪೆಟ್ಟು ಬಿದ್ದಿದ್ದು, ಕೂಡಲೇ ಸ್ಥಳೀಯರು ಮಗುವನ್ನು ಕೆ ಸಿ ಜನರಲ್ ಆಸ್ಪತ್ರೆ ಕರೆದುಕೊಂಡು ಹೋಗಿದ್ದಾರೆ. ಆದರೆ, ದುರಾದೃಷ್ಟವಶಾತ್ ಚಿಕಿತ್ಸೆ ಫಲಿಸದೇ ಮಗು ಕೊನೆಯುಸಿರೆಳೆದಿದೆ. ಘಟನೆ ಬಳಿಕ ಸ್ಥಳಕ್ಕೆ ಮಲ್ಲೇಶ್ವರಂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.