newsics.com
ವಿಜಯವಾಡ: ತಿರುಪತಿ ತಿಮ್ಮಪ್ಪ ಲಡ್ಡು ವಿವಾದ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಹಿಂದಿನ ಸರ್ಕಾರದಲ್ಲಿ ತಿರುಪತಿ ಲಡ್ಡು ಪ್ರಸಾದ ತಯಾರಿಸಲು ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿತ್ತು ಎಂದು ಆಂಧ್ರ ಪ್ರದೇಶ ಸಿಎಂ ಎನ್ ಚಂದ್ರಬಾಬು ನಾಯ್ಡು ಅವರು ಆರೋಪಿಸಿದ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ವೈ ಎಸ್ ಜಗನ್ ಮೋಹನ್ ರೆಡ್ಡಿ ಪ್ರಧಾನ ಮಂತ್ರಿಗಳಿಗೆ ಪತ್ರ ಬರೆದಿದ್ದಾರೆ.
ಈ ಕುರಿತು ಪತ್ರ ಬರೆದಿರುವ ಜಗನ್, ತಿರುಮಲ ತಿರುಪತಿ ದೇವಸ್ಥಾನದ ಪಾವಿತ್ರ್ಯತೆ, ಸಮಗ್ರತೆ ಮತ್ತು ಖ್ಯಾತಿಯನ್ನು ಸರಿಪಡಿಸಲಾಗದಂತೆ ಕಳಂಕ ತರುವ ಪ್ರಯತ್ನಗಳನ್ನು ಸಿಎಂ ಚಂದ್ರಬಾಬು ನಾಯ್ಡು ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಚಂದ್ರಬಾಬು ನಾಯ್ಡು ಒಬ್ಬ ರೋಗಗ್ರಸ್ಥ ಮತ್ತು ಸುಳ್ಳು ಹೇಳುವುದನ್ನು ಕರಗತ ಮಾಡಿಕೊಂಡಿರುವ ವ್ಯಕ್ತಿ. ಕೋಟ್ಯಂತರ ಜನರ ನಂಬಿಕೆಗಳನ್ನು ಗಂಭೀರವಾಗಿ ಘಾಸಿಗೊಳಿಸುವಷ್ಟು ಕೆಳಮಟ್ಟಕ್ಕಿಳಿದಿದ್ದಾರೆ, ಕೇವಲ ರಾಜಕೀಯ ಉದ್ದೇಶಗಳಿಗಾಗಿ ನಾಯ್ಡು ಅವರ ನಾಚಿಕೆಯಿಲ್ಲದ ಸುಳ್ಳನ್ನು ಮತ್ತು ಸತ್ಯವನ್ನು ಹರಡುವ ಕಾರ್ಯವನ್ನು ತೀವ್ರವಾಗಿ ವಾಗ್ದಂಡನೆಗೆ ಒಳಗಾಗುವುದು ಅನಿವಾರ್ಯವಾಗಿದೆ ಎಂದು ಪತ್ರದಲ್ಲಿ ವಿವರಿಸಿದ್ದಾರೆ.