newsics.com
ಬೆಂಗಳೂರು: ತಿರುಮಲ ತಿರುಪತಿ ದೇವಸ್ಥಾನದ ಪ್ರಸಾದ ಲಡ್ಡುವಿನಲ್ಲಿ ಹಂದಿ, ದನ ಸೇರಿದಂತೆ ಇತರೆ ಪ್ರಾಣಿಗಳ ಕೊಬ್ಬು ಪತ್ತೆಯಾದ ಬೆನ್ನಲ್ಲೇ ರಾಜ್ಯದ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಖಾಸಗಿ ಬ್ರ್ಯಾಂಡ್ಗಳ ತುಪ್ಪವನ್ನು ಪರೀಕ್ಷೆಗೊಳಪಡಿಸುವಂತೆ ಆದೇಶಿಸಿದೆ.
ಶನಿವಾರ ಈ ಕುರಿತು ಇಲಾಖೆಯ ಎಲ್ಲಾ ಜಿಲ್ಲಾ ಅಂಕಿತಾಧಿಕಾರಿಗಳು ಪ್ರತಿ ಜಿಲ್ಲೆಗೆ ತಲಾ 5ರಂತೆ ಖಾಸಗಿ ಬ್ರ್ಯಾಂಡ್ಗಳ ತುಪ್ಪದ ಕಾನೂನಾತ್ಮಕ ಆಹಾರ ಮಾದರಿಗಳನ್ನು ಸಂಗ್ರಹಿಸಿ ಅವುಗಳನ್ನು ಸರ್ಕಾರಿ ಪ್ರಯೋಗಾಲಯಗಳಿಗೆ ಗುಣಮಟ್ಟದ ಪರೀಕ್ಷೆಗೆ ಕಳುಹಿಸಿಕೊಡುವಂತೆ ಸೂಚನೆ ನೀಡಲಾಗಿದೆ.
ಎಲ್ಲ ಖಾಸಗಿ ಬ್ರ್ಯಾಂಡ್ಗಳ ತುಪ್ಪದ ಮಾದರಿಯನ್ನು ಎರಡು ದಿನಗಳೊಳಗೆ ಕಳುಹಿಸಬೇಕು. ಆಹಾರ ಮಾದರಿಯ ಸಂಗ್ರಹಣೆಯ ವಿವರಗಳನ್ನು ಪ್ರಯೋಗಾಲಯದ ಹೆಸರಿನೊಂದಿಗೆ ‘ಫುಡ್ ಸೇಫ್ಟಿ ಕಂಪ್ಲೈನ್ಸ್ ಥ್ರೂ ರೆಗ್ಯೂಲರ್ ಇನ್ಸ್ಪೆಕ್ಷನ್ ಆ್ಯಂಡ್ ಸ್ಯಾಂಪ್ಲಿಂಗ್’ನಲ್ಲಿ ದಾಳಿ ನಡೆಸುವಂತೆ ಸೂಚಿಸಲಾಗಿದೆ.
ಲಡ್ಡು ಪ್ರಸಾದ ವಿವಾದ: ತಿರುಪತಿ ದೇಗುಲ ‘ಶುದ್ಧೀಕರಣ’ಕ್ಕೆ ಮುಂದಾದ ಆಂಧ್ರ ಸರ್ಕಾರ
ಲಡ್ಡು ಜಿಡ್ಡು ಲಡಾಯಿ: ಇಂದಿನಿಂದ 11 ದಿನ ಪ್ರಾಯಶ್ಚಿತ್ತ ದೀಕ್ಷೆ- ಡಿಸಿಎಂ ಪವನ್ ಕಲ್ಯಾಣ್
ಲೆಬನಾನ್ ಪೇಜರ್ಗಳ ಸ್ಫೋಟಕ್ಕೆ ಕೇರಳ ನಂಟು: ವಯನಾಡಿನ ಟೆಕ್ಕಿ ರಿನಸನ್ ಜೋಸ್, ಹಂಗೇರಿಯ ಕ್ರಿಸ್ಟಿಯಾನಾ ಪಾತ್ರ ಏನು?