newsics.com
ಸುಳ್ಯ(ದಕ್ಷಿಣ ಕನ್ನಡ): ಕೊಡಗಿನ ಸಂಪಾಜೆ ಹಾಸ್ಟೆಲ್ನಲ್ಲಿದ್ದುಕೊಂಡು ಶಾಲೆಗೆ ಹೋಗುತ್ತಿದ್ದ ಬಾಲಕನೊಬ್ಬನ ಮರ್ಮಾಂಗವನ್ನು ಸಹಪಾಠಿ ವಿದ್ಯಾರ್ಥಿಗಳು ಹಿಡಿದೆಳೆದ ಪರಿಣಾಮ ಬಾಲಕನ ಮರ್ಮಾಂಗಕ್ಕೆ ಗಂಭೀರವಾಗಿ ಪೆಟ್ಟಾಗಿದೆ.
ಅಸ್ವಸ್ಥ ಬಾಲಕನನ್ನು ಮಂಗಳೂರಿನ ವೆನ್ಸಾಕ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಶಸ್ತ್ರಚಿಕಿತ್ಸೆ ಮಾಡಲಾಗಿದೆ.
ಸಂಪಾಜೆಯ ಆಲಡ್ಕ ನಿವಾಸಿಯಾಗಿರುವ 12 ವರ್ಷ ವಯಸಿನ ಬಾಲಕ ಕಳೆದ ಕೆಲ ಸಮಯದಿಂದ ಸಂಪಾಜೆಯ ಹಾಸ್ಟೆಲ್ನಲ್ಲಿದ್ದು ಶಾಲೆಗೆ ಹೋಗುತ್ತಿದ್ದ. ಸೆಪ್ಟೆಂಬರ್ 14ರಂದು ಹಾಸ್ಟೆಲ್ನಲ್ಲಿ ಇಬ್ಬರು ಸಹಪಾಠಿ ವಿದ್ಯಾರ್ಥಿಗಳು ಬಾಲಕನ ಮರ್ಮಾಂಗವನ್ನು ಹಿಡಿದೆಳೆದಿದ್ದರು. ಇದರಿಂದ ಮೂತ್ರ ವಿಸರ್ಜನೆ ವೇಳೆ ನೋವಾಗುತ್ತಿದ್ದ ಕಾರಣ ಮನೆಗೆ ಬಂದಿದ್ದನೆನ್ನಲಾಗಿದೆ.
ಮೊದಲು ಯಾರೊಡನೆಯೂ ವಿಷಯ ತಿಳಿಸಿರಲಿಲ್ಲ. ಮರ್ಮಾಂಗ ಬಾತುಕೊಂಡಿದ್ದರಿಂದ ತಾಯಿಗೆ ಹೇಳಿದ್ದಾನೆ. ಬಳಿಕ ಮನೆಯವರು ಸುಳ್ಯದ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದು, ಅಲ್ಲಿಂದ ಪುತ್ತೂರಿನ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಅಲ್ಲಿ ವೈದ್ಯರ ಸಲಹೆ ಮೇರೆಗೆ ಮಂಗಳೂರಿನ ವೆನ್ಸಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಲ್ಲಿ ಬಾಲಕನಿಗೆ ಶಸ್ತ್ರ ಚಿಕಿತ್ಸೆ ನಡೆಸಲಾಗಿದೆ. ಈಗ ಬಾಲಕ ಚೇತರಿಸಿಕೊಳ್ಳುತ್ತಿದ್ದಾನೆ. ಸಂಪಾಜೆ ಪೊಲೀಸ್ ಹೊರಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಭಾರತಕ್ಕೆ ಹೋಗುವುದು ಸುಲಭ, ಹೊರಬರುವುದು ಬಲು ಕಷ್ಟ: ಭಯೋತ್ಪಾದಕ ಗುರು ಡಾ.ಝಾಕಿರ್ ನಾಯಿಕ್ ಹೇಳಿಕೆ
ಎರಡೂವರೆ ಕೋಟಿಯ ಲೆಕ್ಸಸ್ ಕಾರಿಗೆ ಭಾರತದಲ್ಲಿ ಭಾರೀ ಬೇಡಿಕೆ: ಬುಕಿಂಗ್ ತಾತ್ಕಾಲಿಕ ಸ್ಥಗಿತ!