ಲಡ್ಡು ವಿವಾದ: ನಂದಿನಿ ತುಪ್ಪ‌ ಸಾಗಣೆ ವಾಹನಗಳಿಗೆ ಜಿಪಿಎಸ್!

newsics.com ಬೆಂಗಳೂರು: ತಿರುಪತಿ ಲಡ್ಡು ತಯಾರಿಕೆಯಲ್ಲಿ ಗುಣಮಟ್ಟವಿಲ್ಲದ ತುಪ್ಪ ಬಳಸಲಾಗುತ್ತಿದೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ತಿರುಮಲ ತಿರುಪತಿ ದೇವಸ್ಥಾನ(ಟಿಟಿಡಿ)ಕ್ಕೆ ನಂದಿನಿ ತುಪ್ಪ ಪೂರೈಸುವ ವಾಹನಗಳಿಗೆ ಕರ್ನಾಟಕ ಹಾಲು ಮಹಾಮಂಡಳ(ಕೆಎಂಎಫ್) ಜಿಪಿಎಸ್ ಅಳವಡಿಸಿದೆ ಎಂದು ಉನ್ನತ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ. ಒಂದು ತಿಂಗಳ ಹಿಂದಿನಿಂದ ಟಿಟಿಡಿ ಕೆಎಂಎಫ್‌ಗೆ ಟೆಂಡರ್ ನೀಡಿದ ನಂತರ ನಂದಿನಿ ತುಪ್ಪ ಪೂರೈಕೆಯನ್ನು ಪುನಃ ಆರಂಭಿಸಲಾಗಿದೆ ಎಂದು ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಎಂ ಕೆ ಜಗದೀಶ್ ಹೇಳಿದ್ದಾರೆ. ನಾವು ಒಂದು ತಿಂಗಳ ಹಿಂದೆ ತುಪ್ಪವನ್ನು(ಟಿಟಿಡಿಗೆ) ಸರಬರಾಜು … Continue reading ಲಡ್ಡು ವಿವಾದ: ನಂದಿನಿ ತುಪ್ಪ‌ ಸಾಗಣೆ ವಾಹನಗಳಿಗೆ ಜಿಪಿಎಸ್!