newsics.com
ಬೆಂಗಳೂರು : ಕಲರ್ಸ್ ಕನ್ನಡ ವಾಹಿನಿಯ ಬಿಜಿನೆಸ್ ಹೆಡ್ ಪ್ರಶಾಂತ್ ನಾಯಕ್ ಅವರು, ಬಿಗ್ ಬಾಸ್ ಲಾಂಚ್ಗಿಂತಲೂ ಮೊದಲೇ ಸ್ಪರ್ಧಿಗಳ ಹೆಸರನ್ನು ಬಹಿರಂಗಪಡಿಸಲು ನಾವು ನಿರ್ಧರಿಸಿದ್ದೇವೆ ಎಂದು ಕಿಚ್ಚ ಸುದೀಪ್ ಅವರ ಸಮ್ಮುಖದಲ್ಲೇ ಹೇಳಿದರು.
ಸ್ವರ್ಗ ಮತ್ತು ನರಕದ ಥೀಮ್ ಇರಲಿದೆ. ರಾಜಾ ರಾಣಿ ಶೋ ಫಿನಾಲೆಯಲ್ಲಿ ಬಿಗ್ ಬಾಸ್ನ ಕೆಲವು ಸ್ಪರ್ಧಿಗಳ ಹೆಸರು ರಿವೀಲ್ ಮಾಡುತ್ತೇವೆ. ಇದು ಈ ಬಾರಿಯ ಹೊಸತನ.
ಆ ಸ್ಪರ್ಧಿಗಳು ಸ್ವರ್ಗಕ್ಕೆ ಹೋಗಬೇಕೋ ಅಥವಾ ನರಕಕ್ಕೆ ಹೋಗಬೇಕೋ ಎಂಬುದನ್ನು ನಿರ್ಧರಿಸಲು ವೀಕ್ಷಕರು ಓಟ್ ಮಾಡಬಹುದು ಎಂದು ಪ್ರಶಾಂತ್ ನಾಯಕ್ ತಿಳಿಸಿದ್ದಾರೆ.