newsics.com
ಕೊಪ್ಪಳ: ರಾಷ್ಟ್ರಧ್ವಜದ ಮೇಲಿದ್ದ ಅಶೋಕ ಚಕ್ರದ ಬದಲಿಗೆ ಅರೇಬಿಕ್ ಅಕ್ಷರಗಳನ್ನು ಹಾಕಿ ಧ್ವಜ ಹಾರಿಸಿದ ಹಿನ್ನೆಲೆಯಲ್ಲಿ ಇಬ್ಬರು ಯುವಕರನ್ನು ಕೊಪ್ಪಳ ಪೊಲೀಸರು ಬಂಧಿಸಿದ್ದಾರೆ.
ಮಹ್ಮದ್ ದಾನೀಶ್ ಕುತುಬುದ್ಧೀನ್ ಖಾಜಿ ಹಾಗೂ ಮಹ್ಮದ್ ಆದಿನಾನ್ ಖಾಜಿ ಬಂಧಿತ ಆರೋಪಿಗಳು ಎಂದು ತಿಳಿದು ಬಂದಿದೆ.
ಈದ್ ಮಿಲಾದ್ ಆಚರಣೆ ವೇಳೆ ಬಟ್ಟೆಯಿಂದ ತ್ರಿವರ್ಣ ಧ್ವಜ ಹೊಲಿದು ಬಿಳಿಬಣ್ಣದ ಜಾಗದಲ್ಲಿ ಅಶೋಕ ಚಕ್ರದ ಬದಲಿಗೆ ಅರೇಬಿಕ್ ಅಕ್ಷರದಲ್ಲಿ ‘ಲಾ ಇಲ್ಲಾಹ ಇಲ್ಲಾಲ್ಲಾ ಮೊಹಮದ್ ರಸೂಲಲ್ಲಾ’ ಎಂದು ಬರೆಯಲಾಗಿತ್ತು. ಮದೀನಾ ಮಸೀದಿಯ ಚಿತ್ರವನ್ನು ಸಹ ಧ್ವಜದ ಮೇಲೆ ಚಿತ್ರಿಸಿರುವುದನ್ನು ಆರೋಪಿಗಳು ಒಪ್ಪಿಕೊಂಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಆರೋಪಿಗಳು ಭಾರತದ ರಾಷ್ಟ್ರಧ್ವಜವನ್ನು ಅಪಮಾನ ಹಾಗೂ ವಿರೂಪಗೊಳಿಸುವ ಉದ್ದೇಶದಿಂದ ದರ್ಗಾ ಮೇಲೆ ಧ್ವಜ ಹಾರಿಸಿದ್ದಾಗಿ ಗೊತ್ತಾಗಿದೆ. ಸ್ಥಳೀಯ ಪೊಲೀಸ್ ಠಾಣೆಯ ಸಿಬ್ಬಂದಿ ಬಾಳನಗೌಡ ಪೊಲೀಸ್ಪಾಟೀಲ ನೀಡಿದ ದೂರಿನ ಮೇಲೆ ಈ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು, ಆರೋಪಿಗಳನ್ನು ಬಂಧಿಸಿದ್ದಾರೆ.