ಸಿಎಂ ಸಿದ್ದುಗೆ ಸಾಲು ಸಾಲು ಸಂಕಷ್ಟ: ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ನಲ್ಲಿಂದು ಮುಡಾ ವಿಚಾರಣೆ

newsics.com ಬೆಂಗಳೂರು: ಸಿಎಂ ಸಿದ್ದರಾಮಯ್ಯ ಪಾಲಿಗೆ ಸಂಕಷ್ಟದ ದಿನಗಳು ಆರಂಭವಾಗಿವೆ. ತನಿಖೆಗೆ ಅನುಮತಿ ನೀಡಿದ್ದ ರಾಜ್ಯಪಾಲರ ಆದೇಶ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಹೈಕೋರ್ಟ್ ಮಂಗಳವಾರ ವಜಾಗೊಳಿಸಿದ್ದು, ಇದರ ಬೆನ್ನಲ್ಲೇ ಬುಧವಾರ(ಸೆ.25) ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ನಲ್ಲಿ ವಿಚಾರಣೆ ನಡೆಯಲಿದೆ. ಇದರಿಂದ ಮುಡಾ ನಿವೇಶನ ಹಂಚಿಕೆಯಲ್ಲಿ ನ್ಯಾಯವಲ್ಲದ ಲಾಭ ಪಡೆದ ಆರೋಪ ಹೊತ್ತಿರುವ ಸಿಎಂ ಸಿದ್ದರಾಮಯ್ಯಗೆ ಈಗ ಎಫ್‌ಐಆರ್ ಭೀತಿ ಶುರುವಾಗಿದೆ. ಸಿದ್ದರಾಮಯ್ಯ ವಿರುದ್ಧದ ಆರೋಪಗಳಿಗೆ ತನಿಖೆ ಅಗತ್ಯವೆಂದು ಹೇಳಿರುವ ಹೈಕೋರ್ಟ್, ಸಿಎಂ ಸಿದ್ದರಾಮಯ್ಯ ರಿಟ್ … Continue reading ಸಿಎಂ ಸಿದ್ದುಗೆ ಸಾಲು ಸಾಲು ಸಂಕಷ್ಟ: ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ನಲ್ಲಿಂದು ಮುಡಾ ವಿಚಾರಣೆ